Breaking News
Home / Breaking News / ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡದಿಂದ, ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರ ಪಟ್ಟು…!!

ಧಾರವಾಡ ‌ಲೋಕಸಭೆ ಅಭ್ಯರ್ಥಿ ಪ್ರಹ್ಲಾದ್ ‌ಜೋಶಿ ಬದಲಾವಣೆಗೆ ದಿಂಗಾಲೇಶ್ವರ ಸ್ವಾಮೀಜಿ ಆಗ್ರಹ: ಮಾ.31 ರ ಗಡುವು ನೀಡಿದ ಮಠಾಧೀಶರು…

ಹುಬ್ಬಳ್ಳಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು ಮಾ. 31 ರೊಳಗೆ ಬದಲಾವಣೆ ಮಾಡಬೇಕೆಂದು ಶಿರಹಟ್ಟಿಮಠದ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಗ್ರಹಿಸಿದರು.

ಮೂರುಸಾವಿರಮಠದ ಆವರಣದಲ್ಲಿ ವಿವಿಧ ಸ್ವಾಮೀಜಿಗಳೊಂದಿಗೆ ಚಿಂತನ ಮಂಥನ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಬದಲಾವಣೆ ಆಗದಿದ್ದರೇ ಎಪ್ರಿಲ್ 2 ರಂದು ಮತ್ತೊಮ್ಮೆ ಸಭೆ ನಡೆಸಿ ನಿರ್ಧಾರ ಪ್ರಕಟಿಸಲಾಗುವುದು ಎಂದರು‌.

ಪ್ರಹ್ಲಾದ್ ಜೋಶಿ ಅವರಿಗೆ ಅಧಿಕಾರ ಮತ್ತು ಸಂಪತ್ತಿನ ಮದವೇರಿದ್ದು, ಲಿಂಗಾಯತ, ಕುರುಬ ಸೇರಿದಂತೆ ಎಲ್ಲ ಸಮೂದಾಯವನ್ನು ತುಳಿದಿದ್ದಾರೆ. ಸ್ವಾಮೀಜಿಗಳನ್ನು ಅವಮಾನಿಸಿದ್ದಾರೆ. ನಮ್ಮ ವಿರೋಧ ಅವರ ವ್ಯಕ್ತಿತ್ವಕ್ಕೆ ಹೊರತು ಪಕ್ಷ ಅಥವಾ ಸಮಾಜಕ್ಕೆ ಅಲ್ಲ ಎಂದು ಹೇಳಿದರು.

ಕೇಂದ್ರ ಸಚಿವರು ಏಕ ಸ್ವಾಮ್ಯತ್ವವನ್ನು ಸಾಧಿಸುತ್ತಿದ್ದಾರೆ. ಹೀಗಾಗಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಹಾಕಬೇಕು ಎಂದು ಬಿಜೆಪಿ ಹೈಕಮಾಂಡ್ ಗೆ ಶ್ರೀಗಳು ಗಡವು ನೀಡಿದ್ದಾರೆ.

ಏ. 2 ರಂದು ಜೋಶಿಯವರ ಕ್ಷೇತ್ರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ನೂರಾರು ಮಠಾಧೀಶರ ಸಮ್ಮುಖದಲ್ಲಿ ಸಭೆ ನಡೆಸಲಾಗುವುದು. ಮತ್ತೊಮ್ಮೆ ಸಭೆ ನಡೆಸಿ ಮುಂದಿನ ನಿರ್ಧಾರ ತಗೆದುಕೊಳ್ಳಲಾಗುತ್ತದೆ ಎಂದರು‌

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕ್ಷೇತ್ರ ತ್ಯಾಗ ಮಾಡಿದಂತೆ ಅವರು ಕೂಡಾ ಕ್ಷೇತ್ರವನ್ನು ತ್ಯಾಗ ಮಾಡಬೇಕು ಎಂದ ಅವರು ಜೋಶಿಯವರಿಗೆ ಚುನಾವಣೆ ಬಂದಾಗ ಮಾತ್ರ ವೀರಶೈವ ಲಿಂಗಾಯತ ಸಮಾಜ ಹಾಗೂ ಇತರೆ ಸಮಾಜಗಳು ಮಾತ್ರ ಅವರಿಗೆ ನೆನಪಾಗುತ್ತದೆ. ಅವರ ನಡೆ ನುಡಿ ಬದಲಾಗಿದೆ. ಅವರು ಬಹಳಷ್ಟು ಸಮಾಜವನ್ನು ತುಳಿದಿದ್ದಾರೆ. ಅಲ್ಲದೇ ಮಠಾಧೀಶರಿಗೆ ನೋವು ಕೊಟ್ಟಿದ್ದಾರೆ. ಬಹಳಷ್ಟು ಕಾರ್ಯಕರ್ತರನ್ನು ತುಳಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು ರಾಜಕೀಯ ನಾಯಕರಾಗಿ ಅವರು ಇಲ್ಲಿ ಉಳಿಯಲು ಸಾಧ್ಯವಿಲ್ಲ ಎಂದರು.

ಜೋಶಿಯವರನ್ನು ಬೇರೆ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕು. ನಮ್ಮ ಕಡೆಯಿಂದ ಸದ್ಯಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡುವುದಿಲ್ಲ ಇಲ್ಲವಾದರೆ ಏ. 2ರಂದು ನಮ್ಮ ನಿರ್ಧಾರ ಪರಿಣಾಮಕಾರಿಯಾಗಿರುತ್ತದೆ ಎಂದರು.

ಉತ್ತರ ಭಾರತದಲ್ಲಿ ಸಾದುಸಂತರಯ ರಾಜಕಾರಣ ಮಾಡುತ್ತಾರೆ. ಆ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ರಾಜಕೀಯ ಪಕ್ಷ ಸೇರಿ ನಿಲ್ಲಬೇಕೋ ಬೇಡವಾ ಮದಾಗ ನಿಲ್ಲಬೇಕು ಎಂದು ಮಠಾಧೀಶರು ನಿರ್ಣಯ ತಗೆದುಕೊಂಡಿದ್ದಾರೆ. ಈ ವಿಚಾರವಾಗಿ ಸರ್ವಾನುಮತದಿಂದ ಅಪಸ್ವರ ಎತ್ತಿಲ್ಲ ಎಂದರು.

ಸುದ್ದಿಗೋಷ್ಟೀಯಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ 40 ಕ್ಕೂ ಹೆಚ್ಚು ಮಠಾಧೀಶರು ಉಪಸ್ಥಿತರಿದ್ದರು .

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *