Breaking News

ಬೆಳಗಾವಿ – ಗೋವಾ ಬಾರ್ಡರ್ ನಲ್ಲಿ 7 ಲಕ್ಷ ಸೀಜ್ ಆಯ್ತು…

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಚೆಕ್‌ಪೋಸ್ಟ್‌ನಲ್ಲಿ ಶುಕ್ರವಾರ, ದಾಖಲೆಗಳಿಲ್ಲದ ₹7.98 ಲಕ್ಷ ಹಣವನ್ನು ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರ ತಂಡ ವಶಕ್ಕೆ ಪಡೆದಿದೆ.

ನಗರದ ನಿವಾಸಿ ಸಂಜಯ ಬಸವರಾಜ ರೆಡ್ಡಿ ಎನ್ನುವವರು ಸರ್ಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಹಣ ಇಟ್ಟುಕೊಂಡಿದ್ದರು. ಬಸ್‌ ಗೋವಾದಿಂದ ಬೆಳಗಾವಿ ಕಡೆಗೆ ಬರುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡುವ ವೇಳೆ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಹಣ ಮುಟ್ಟುಗೋಲು ಹಾಕಿಕೊಂಡು ಖಾನಾಪುರದ ಉಪ ಖಜಾನೆಯಲ್ಲಿ ಇರಿಸಲಾಗಿದೆ ಎಂದು ಖಾನಾಪುರ ಸಹಾಯಕ ಚುನಾವಣಾಧಿಕಾರಿ ತಿಳಿಸಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *