ಬೆಳ್ಳಂ ಬೆಳಗ್ಗೆ ಕೋರೆ ಮನೆಯಲ್ಲಿ ಮಾಸ್ಟರ್ ಪ್ಲ್ಯಾನ್….!!

ಬೆಳಗಾವಿ- ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಇಂದು ಬೆಳ್ಳಂ ಬೆಳಗ್ಗೆ ಕೋರೆ ನಿವಾಸದಲ್ಲಿ ಚಹಾ ಪೇ ಚರ್ಚಾ ಮಾಡಿದ್ರು ಮಾಜಿ ಶಾಸಕರ ಅನೀಲ ಬೆನಕೆ ಅವರು ಸಹ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಜಗದೀಶ್ ಶೆಟ್ಟರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಅವರು ಇದೇ ಮೊದಲ ಬಾರಿಗೆ ಪ್ರಭಾಕರ ಕೋರೆ ಅವರನ್ನು ಭೇಟಿಯಾಗಿ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚನೆ ನಡೆಸಿದ್ರು…

ಪ್ರಭಾಕರ ಕೋರೆ ಅವರು ಬಿಜೆಪಿಯ ಹಿರಿಯ ನಾಯಕರಾಗಿದ್ದು ವೀರಶೈವ ಲಿಂಗಾಯತ ಸಮಾಜದ ಪ್ರಭಾವಿ ಮುಖಂಡರಾಗಿದ್ದಾರೆ.ಜಗದೀಶ್ ಶೆಟ್ಟರ್ ಗೆಲುವಿಗಾಗಿ ಪ್ರಭಾಕರ್ ಕೋರೆ ಅವರು ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ‌.

ಜಗದೀಶ್ ಶೆಟ್ಟರ್ ಅವರಿಗೆ ಆರಂಭದಲ್ಲಿ ಸ್ಥಳೀಯ ನಾಯಕರು ವಿರೋಧ ಮಾಡಿದ್ರು, ನಮಗೆ ಲೋಕಲ್ ಅಭ್ಯರ್ಥಿಯೇ ಬೇಕು ಎಂದು ಪಟ್ಟು ಹಿಡಿದಿದ್ರು ಆದ್ರೆ ಮಾಜಿ ಸಿಎಂ ಯಡಿಯೂರಪ್ಪ ಅವರ ಮದ್ಯಸ್ಥಿಕೆಯಿಂದ ಈ ಸ್ಥಳೀಯ ನಾಯಕರ ಅಸಮಾಧಾನ ಸಂಪೂರ್ಣವಾಗಿ ಶಮನವಾಗಿದೆ.ಈಗ ಎಲ್ಲ ಸ್ಥಳೀಯ ನಾಯಕರು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರವಾಗಿ ಕೆಲಸ ಮಾಡುತ್ತಿದ್ದಾರೆ‌‌.

ಬೆಳಗಾವಿ ಜಿಲ್ಲೆಯ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು, ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲಿ ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡು ಈಗ ಕ್ಷೇತ್ರದಲ್ಲಿ ಪ್ರಚಾರ ಶುರುಮಾಡಿದ್ದಾರೆ.ಬೆಳಗಾವಿ ನಗರ,ಸವದತ್ತಿ,ಯಲ್ಲಿ ಪ್ರಚಾರ ಮುಗಿಸಿರುವ ಜಗದೀಶ್ ಶೆಟ್ಟರ್ ಅವರು ಇಂದು ಗೋಕಾಕ್ ಮತ್ತು ಅರಭಾಂವಿ ಯಲ್ಲಿ ಪ್ರಚಾರ ನಡೆಸಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *