Breaking News

ಪಿಎಂ-ಸಿಎಂ ಪರಿಹಾರ ನಿಧಿಗೆ 3.33 ಲಕ್ಷ ದೇಣಿಗೆ ನೀಡಿದ ನಿವೃತ್ತ ಆರೋಗ್ಯ ಮೇಲ್ವಿಚಾರಕ ಶಿವನಪ್ಪ

ಬೆಳಗಗಾವಿ, ಏ.: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ ಖಣಗಣ್ಣಿ ಅವರು ಕೋವಿಡ್ ನಿಯಂತ್ರಣಕ್ಕಾಗಿ ಪ್ರಧಾನ ಮಂತ್ರಿ ಮತ್ತು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಪ್ರತ್ಯೇಕವಾಗಿ 111000/- ರಂತೆ 222000/- ಗಳ ಚೆಕ್ ನ್ನು ಮಂಗಳವಾರ (ಏ.28) ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದರು.

ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಚೆಕ್ ಸ್ವೀಕರಿಸಿದರು.

ಆರೋಗ್ಯ ಇಲಾಖೆಯ ವಿಭಾಗೀಯ ಸಹ ನಿರ್ದೇಶಕರಾದ ಡಾ.ಅಪ್ಪಾಸಾಹೇಬ್ ನರಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ವಿ.ಮುನ್ಯಾಳ, ಸಹಾಯಕ ಆಡಳಿತ ಅಧಿಕಾರಿ ರಮೇಶ ಮಡಿವಾಳ ಉಪಸ್ಥಿತರಿದ್ದರು.

ಕೋವಿಡ್-19 ನಿಯಂತ್ರಣಕ್ಕಾಗಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ನಿವೃತ್ತ ಆರೋಗ್ಯ ಮೇಲ್ವಿಚಾರಕರಾದ ಶಿವನಪ್ಪ ಬಿ ಖಣಗಣ್ಣಿ ಅವರನ್ನು ಇಲಾಖೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.
***

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *