ವಾರ್ಡನ್ ಮೇಲೆ ಹಲ್ಲೆ ಮಾಡಿದ ಹಿಂಡಲಗಾ ಕೈದಿ….

ಬೆಳಗಾವಿ
ರಾಜ್ಯದಲ್ಲಿ ದೊಡ್ಡ ಕಾರಾಗೃಹದಲ್ಲಿ ಒಂದಾಗಿರುವ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸಿಬ್ಬಂದಿಗಳಿಗೇ ರಕ್ಷಣೆ ಇಲ್ಲದಂತಾಗಿದೆ. ಕೈದಿಗಳು ಸೃಷ್ಟಿಸಿರುವ ಜೀವಭಯದಲ್ಲಿ ಸಿಬ್ಬಂದಿಗಳೇ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕುವಂತಾಗಿದೆ.

ರೂಲ್ಸ್ ಫಾಲೋ ಮಾಡು ಎಂದಿದ್ದಕ್ಕೆ ಕೈದಿಗಳಿಂದ ಸಿಬ್ಬಂದಿ ಮೇಲೆ ಗೂಂಡಾಗಿರಿ ನಡೆದಿದ್ದು, ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಬ್ಬಂದಿ ಈ ಬಗ್ಗೆ ದೂರು ನೀಡಿದ್ದಾರೆ.
ಹಲ್ಲೆಗೊಳಗಾದ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದು,ಹಿಂಡಲಗಾ ಜೈಲಿನ ವಾರ್ಡರ್ ವಿನೋದ್ ಲೋಕಾಪುರ್ ಎಂಬವರ ಮೇಲೆ ಹಲ್ಲೆಯಾಗಿದೆ. ಹಲ್ಲೆಗೊಳಗಾದ ವಿನೋದ್ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣದ ಹಿನ್ನೆಲೆ:
ಕಾರಾಗೃದಲ್ಲಿ ಎಲ್ಲರೂ ಒಂದೆ ಕಾನೂನು ಪಾಲನೆ ಮಾಡಬೇಕು ಎಂದು ಹಾಸನದಿಂದ ಗಡಿಪಾರಾಗಿ ಬೆಳಗಾವಿ ಹಿಂಡಲಗಾ ಜೈಲಿಗೆ ಶಿಪ್ಟ್ ಆಗಿರುವ ಕೈದಿ ರಾಹಿಲ್ ಅಲಿಯಾಸ್ ರೋಹನ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.ಅತೀ ಭದ್ರತೆ ವಿಭಾಗದಲ್ಲಿದ್ದ ಕೈದಿ ರೋಹನ್ ಆಸ್ಪತ್ರೆಗೆ ಹೋಗಲು ಸ್ಥಳೀಯ ಸಿಬ್ಬಂದಿ ಅನುಮತಿ ಬೇಕಾಗುತ್ತೆ.ತಡವಾಗಿ ಅನುಮತಿ ನೀಡಿದರೂ ಎನ್ನುವ ಕಾರಣಕ್ಕೆ ಹೊರ ಬಂದು ವಿನೋದ್ ಮೇಲೆ ಹಲ್ಲೆ ಮಾಡಿದ್ದಲ್ದೆ, ಕಾಲಿನಿಂದ ಒದ್ದು ಕೈಯಿಂದ ಹಿಗ್ಗಾಮಗ್ಗಾ ಹೊಡೆದು ಹಲ್ಲೆ ಮಾಡಿದ್ದಾನೆ.

ತೀವ್ರವಾಗಿ ಗಾಯಗೊಂಡ ವಿನೋದ್ ಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೈದಿ ಹಲ್ಲೆ ಮಾಡಿದ ವಿಷಯ ಮೇಲಾಧಿಕಾರಿಗಳ ಗಮನಕ್ಕೆ ತಂದ್ರೂ ಕ್ರಮಕ್ಕೆ ಮುಂದಾಗದೇ ನಿರ್ಲಕ್ಷ್ಯ ವಹಿಸಿರುವುದು, ಕೈದಿಗಳ ಗೂಂಡಾಗಿರಿಗೆ ಬೇಸತ್ತು ಕೆಲಸಕ್ಕೆ ಬರಲು ಭಯ ಪಡುವ ಸ್ಥಿತಿ ಸಿಬ್ಬಂದಿಯದ್ದಾಗಿದೆ.

ಈ ಹಿಂದೆಯೂ ಸಿಬ್ಬಂದಿ ಮೇಲೆ‌ ಹಲ್ಲೆಯಾಗಿದೆ ಕ್ರಮ ಆಗಿಲ್ಲ‌. ಮೇಲಾಧಿಕಾರಿಗಳು ಈಗಲಾದರೂ ಕ್ರಮ ಕೈಗೊಳ್ಳುವಂತೆ ಹಲ್ಲೆಗೊಳಗಾದ ಸಿಬ್ಬಂದಿ ವಿನೋದ್ ಮನವಿ ಮಾಡಿದ್ದಾರೆ.

Check Also

ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ವರ್ಗಾವಣೆ

ಬೆಳಗಾವಿ -ಕಳೆದ ಎರಡು ವರ್ಷಗಳಿಂದ ಬೆಳಗಾವಿ ಡಿಸಿಪಿ ( ಕಾ.ಸೂ) ಯಾಗಿ ಕರ್ತವ್ಯ ನಿಭಾಯಿಸಿದ ರೋಹನ್ ಜಗದೀಶ್ ಅವರ ವರ್ಗಾವಣೆಯಾಗಿದ್ದು …

Leave a Reply

Your email address will not be published. Required fields are marked *