Breaking News

ಗೆದ್ದ ಬಳಿಕ ಮಾಜಿ ಸಂಸದೆ ಮಂಗಲಾ ಅಂಗಡಿ ಹೇಳಿದ್ದು….

ಬೆಳಗಾವಿ
ಬಿಜೆಪಿ ವಿರುದ್ಧ ಅಪ್ರಚಾರ ಮಾಡಿದ್ದ ಕಾಂಗ್ರೆಸ್ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿಯೇ ಜಗದೀಶ್ ಶೆಟ್ಟರ್ ಅವರಿಗೆ ಹೆಚ್ಚಿನ ಲೀಡ್ ಬಂದಿದೆ ಎಂದು ಮಾಜಿ ಸಂಸದೆ ಮಂಗಲಾ ಅಂಗಡಿ ಲೇವಡಿ ಮಾಡಿದರು.

ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಚುನಾವಣೆಯಲ್ಲಿ ನನ್ನ ವಿರುದ್ಧ ದಿ.ಸುರೇಶ ಅಂಗಡಿ ಹಾಗೂ ಜಗದೀಶ್ ಶೆಟ್ಟರ್ ಗೆ ವ್ಯಾಪಕವಾಗಿ ಅಪಪ್ರಚಾರ ನಡೆಸಿದರು. ಆದರೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಲೀಡ್ ಕೊಟ್ಟ ಜನರು ಅವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದರು.
ಜಗದೀಶ್ ಶೆಟ್ಟರ್ ಅವರ ಗೆಲುವು ಯಾರೂ ನಿರೀಕ್ಷೆ ಮಾಡಿರದ ರೀತಿಯಲ್ಲಿ ಫಲಿತಾಂಶ ಬಂದಿದೆ. ಸುರೇಶ ಅಂಗಡಿ ಅವರು ಗೆಲುವು ಸಾಧಿಸುತ್ತಿದ್ದ ಮಾದರಿಯಲ್ಲಿ ಶೆಟ್ಟರ್ ಗೆಲುವು ಸಾಧಿಸಿದ್ದಾರೆ. ಮುಂದೆ ಜಗದೀಶ್ ಶೆಟ್ಟರ್ ಅವರು ಕೇಂದ್ರ ಸಚಿವರಾಗಲಿದ್ದಾರೆ ಎಂದರು.

ಬೆಳಗಾವಿ ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ದಿ.ಸುರೇಶ ಅಂಗಡಿ ಹಾಗೂ ನಾನು ಏನೂ ಕೆಲಸ ಮಾಡಿಲ್ಲ ಎಂದು ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ಇನ್ನಾದರೂ ನೋಡಿಕೊಂಡು ಮಾತನಾಡಲಿ ಎಂದರು.

ಕೇಂದ್ರದಲ್ಲಿ ನರೇಂದ್ರ ‌ಮೋದಿ ಅವರು ಮೂರನೇ ಪ್ರಧಾನಿಯಾಗುವುದು ನಿಶ್ಚಿತ. ಚಂದ್ರಬಾಬು ನಾಯ್ಡು, ನಿತೇಶ್ ಕುಮಾರ ಎನ್ ಡಿಎಗೆ ಬೆಂಬಲ ‌ನೀಡುವುದಾಗಿ ತಿಳಿಸಿದ್ದಾರೆ. ಮೋದಿ ಸರಕಾರ‌‌ ರಚನೆ ಮಾಡಿಯೇ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Check Also

ಶಾಲಿನಿ ರಜನೀಶ್, ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ..

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ​ ಪತ್ನಿ ಶಾಲಿನಿ …

Leave a Reply

Your email address will not be published. Required fields are marked *