ಬರ್ತ್ ಡೇ ಪಾರ್ಟಿಗೆ ಕರೆದು ಯುವಕನ ಮರ್ಡರ್….

ಬರ್ತ್ ಡೇ ಪಾರ್ಟಿಗೆ ಕರೆದು ಯುವಕನ ಮರ್ಡರ್

ಬೆಳಗಾವಿ-ಜನ್ಮ ದಿನಕ್ಕೆ ಕರೆದು ಸ್ನೇಹಿತನನ್ನೆ ಭೀಕರವಾಗಿ ಕೊಲೆ ಮಾಡಿದ ಘಟನೆ ನುಗ್ಗಾನಟ್ಟಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ
ಬಸವರಾಜ ಗುರುಲಿಂಗಪ್ಪ ಮುದ್ದಣ್ಣವರ ( 23) ಕೊಲೆಯಾದ ದುರ್ದೈವಿಯಾಗಿದ್ದಾನೆ
.ಜನ್ಮ ದಿನಕ್ಕೆ ಕರೆದು ವೈಯಕ್ತಿಕ ಜಗಳಕ್ಕೆ ತಿರುಗಿ ನಾಲ್ಕೈದು ಜನ ಸೇರಿಕೊಂಡು ಬಸವರಾಜನನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ.ಎಂದು ತಿಳಿದು ಬಂದಿದೆ.

ಯುವಕ ಮನೆಯಲ್ಲಿ ಚಹಾ ಕುಡಿಯುತ್ತಿದ್ದಾಗ ಈತನ ಗೆಳೆಯರು ಫೋನ್ ಮಾಡಿ ಕರೆದಿದ್ದಾರೆ. ತಾಯಿ ಚಹಾ ಮಾಡುವಷ್ಟರಲ್ಲಿ ಮಗ ಚಹಾ ಕುಡಿಯದೇ ಗೆಳೆಯರ ಹತ್ತಿರ ಹೋಗಿದ್ದಾನೆ.ಯಾವುದೋ ಕಾರಣಕ್ಕೆ ಗೆಳೆಯರ ನಡುವೆ ಜಗಳ ಆಗಿದೆ. ಈ ಗಲಾಟೆ ಕೊನೆಗೆ ಯುವಕನ ಹತ್ಯೆಯಲ್ಲಿ ಅಂತ್ಯವಾಗಿದೆ.

ಹತ್ಯೆಯಾದ ಯುವಕ ಸಮಾಜ ಸೇವಕನಾಗಿದ್ದ,ಅನಾಥ ಮಕ್ಕಳಿಗೆ, ಅಸಹಾಯಕರಿಗೆ ಸಹಾಯ ಮಾಡುತ್ತಿದ್ದ ಎಂದು ತಾಯಿ ಕಣ್ಣೀರು ಹಾಕಿದ್ದಾಳೆ.ಈ ಕುರಿತು ಮುರುಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *