Breaking News

ಬೆಳಗಾವಿ ಮಹಾನಗರ ಪಾಲಿಕೆ ಸಭೆಯಲ್ಲಿ ಗಟ್ಟಿ ನಿರ್ಧಾರ….!!!

ಬೆಳಗಾವಿ- ಇಂದು ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.ಬೆಳಗಾವಿಯಲ್ಲಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿರುವ L& T ಕಂಪನಿ ಮಾಲೀಕನ ವಿರುದ್ಧ ದೂರು ದಾಖಲಿಸುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಬೆಳಗಾವಿ ಮಹಾನಗರದಲ್ಲಿ ನೀರು ಸರಬರಾಜು ಮಾಡುವ ಗುತ್ತಿಗೆಯ ಜೊತೆಗೆ ನಗರದಲ್ಲಿ ನಿರಂತರ ನೀರು ಪೂರೈಸುವ ಯೋಜನೆಯ ಕಾಮಗಾರಿ ನಡೆಸಿ ನಗರದ ರಸ್ತೆಗಳನ್ನು ಹಾಳು ಮಾಡುತ್ತಿರುವ L&T ಕಂಪನಿಯ ವಿರುದ್ಧ ಶಾಸಕ ಅಭಯ ಪಾಟೀಲ ಸೇರಿದಂತೆ ಹಲವಾರು ಜನ ನಗರ ಸೇವಕರು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು ಶಾಸಕ ಅಭಯ ಪಾಟೀಲ ಮಾತನಾಡಿ,L&T ಕಂಪನಿ ಮನಬಂದಂತೆ ಕೆಲಸ ಮಾಡುತ್ತಿದೆ. ಈ ಕಂಪನಿಯ ಪ್ರತಿನಿಧಿಗಳು ಯಾರ ಮಾತನ್ನೂ ಕೇಳುತ್ತಿಲ್ಲ,ಹತ್ತು ಹಲವು ಬಾರಿ ವಾರ್ನಿಂಗ್ ಮಾಡಿದ್ರೂ ಯಾವುದೇ ಪ್ರಯೋಜನ ಆಗಿಲ್ಲ ಈ ಬಾರಿ ಕಂಪನಿ ಮಾಲೀಕನ ವಿರುದ್ಧ ದೂರು ದಾಖಲಿಸಿಬೇಕು ಅಂದಾಗ ಮಾತ್ರ ಇವರಿಗೆ ಬುದ್ದಿ ಬರುತ್ತದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ರು.

ಬೆಳಗಾವಿ ಮಹಾನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಪಬ್ಲೀಕ್ ಟಾಯ್ಲೆಟ್ ಗಳನ್ನು ನಿರ್ಮಿಸುವ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಯಿತು.ಬೆಳಗಾವಿಯ ಯರಮಾಳ ರಸ್ತೆಯ ಮಾರುತಿ ಗಲ್ಲಿ,ನಾಥ ಪೈ ಸರ್ಕಲ್ ರಿಸಾಲದಾರ್ ಗಲ್ಲಿ,ಖಾಸಬಾಗದ ಮಾರುತಿ ಗಲ್ಲಿ, ಕಸಾಯಿ ಗಲ್ಲಿ ಸೇರಿದಂತೆ ಒಟ್ಟು ಒಂಬತ್ತು ಕಡೆ ಪಬ್ಲಿಕ್ ಟಾಯ್ಲೆಟ್ ಗಳನ್ನು ನಿರ್ಮಿಸುವ ನಿರ್ಧಾರ ಕೈಗೊಳ್ಳಲಾಯಿತು.

ಶಾಸಕ ಅಭಯ ಪಾಟೀಲ ಮತ್ತು ಶಾಸಕ ರಾಜು ಸೇಠ ಅವರ ಪ್ರಯತ್ನದಿಂದಾಗಿ ಬೆಳಗಾವಿ ಮಹಾನಗರದ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬೆಳಗಾವಿ ಮಹಾನಗರಕ್ಕೆ 135 ಕೋಟಿ ಮಂಜೂರಾಗಿದ್ದು ನಗರ ಸೇವಕರು ಶಾಸಕರನ್ನು ಸಭೆಯಲ್ಲಿ ಅಭಿನಂದಿಸಿ ವಂದಿಸಿದರು.

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದ ಬೆಳಗಾವಿಯ ಡಾ.ಶರಣಪ್ಪ

  ಬೆಳಗಾವಿ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್)ಯ ವೈದ್ಯಕೀಯ ವಿದ್ಯಾರ್ಥಿ ರಾಷ್ಟ್ತಮಟ್ಟದ ಪಿ.ಜಿ. ನೀಟ್ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.