Breaking News

ದೇವಸ್ಥಾನ ಸ್ವಚ್ಛ ಮಾಡುವಾಗ ವಿದ್ಯುತ್ ತಗಲಿ ಇಬ್ಬರು ಮಹಿಳೆಯರ ಸಾವು…

ಬೆಳಗಾವಿ-ಶ್ರಾವಣ ಸೋಮವಾರದಂದೇ ದೇವಸ್ಥಾನ ಸ್ವಚ್ಛ ಮಾಡುತ್ತಿದ್ದ ಸಂಧರ್ಭದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮಹೀಳೆಯರು ಸಾವನ್ನೊಪ್ಪಿದ ಘಟನೆ ನಡೆದಿದೆ.

ದೇವಸ್ಥಾನ ಸ್ವಚ್ಚಗೊಳಿಸುವ ವೇಳೆ ನಡೆದ ದುರ್ಘಟನೆಯಿಂದಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.
ಗ್ರಾಮದ ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿ ಶೆಟರ್ ಹಾಕುವಾಗ ಈ ದುರ್ಘಟನೆ ನಡೆದಿದೆ.

ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಸ್ಥಳದಲ್ಲಿಯೇ ಸಾವನ್ನೊಪ್ಪಿದ್ದಾರೆ.ದೇವಸ್ಥಾನ ಸ್ವಚ್ಛಗೊಳಿಸಿ ಶೆಟರ್ ಹಾಕುವಾಗ ಶೆಟರ್ ಗೆ ವಿದ್ಯುತ್ ಪ್ರವಹಿಸಿ ದುರ್ಘಟನೆ ನಡೆದಿದೆ.ಜಿಟಿ ಜಿಟಿ ಮಳೆಗೆ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಘಟನೆ ನಡೆದಿದ್ದುಘಟನೆಯಲ್ಲಿ ಕಲಾವತಿ ಪತಿ ಮಾರುತಿ ಬೀದರವಾಡಿಗೆ ಗಂಭೀರ ಗಾಯಗೊಂಡಿದ್ದಾರೆ.

ಗಾಯಗೊಂಡ ಮಾರುತಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಘಟನೆಯಿಂದ ಗ್ರಾಮದಲ್ಲಿ ಸೂತಕದ ವಾತಾವರಣ ಆವರಿಸಿದೆ.
ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *