Breaking News

ಬೆಳ್ಳಂ ಬೆಳಗ್ಗೆ,ತಲಾಠಿ ಮನೆಯ ಮೇಲೆ ಲೋಕಾಯುಕ್ತ ದಾಳಿ

ಬೆಳಗಾವಿ-ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.ಬೋರಗಾಂವ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಎಂಬಾತನ ಮೇಲೆ ದಾಳಿ ನಡೆದಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದಲ್ಲಿರುವ,ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿರೋ ಲೋಕಾಯುಕ್ತರು ತನಿಖೆ ನಡೆಸಿದ್ದಾರೆ.ಮನೆಯಲ್ಲಿ ದಾಳಿ ಸಂದರ್ಭ ಒಂದು ಲಕ್ಷ ರೂ ಹಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ನಿಪ್ಪಾಣಿ ಪಟ್ಟಣದ ಬಾಡಿಗೆ ಮನೆ ಇದಾಗಿದೆ.ದಾಖಲೆ ಪರಿಶೀಲನೆ ಕಾರ್ಯ ಮುಂದುವರೆದಿದೆ.

ಈ‌ ಹಿಂದೆ ಬೆಳಗಾವಿಯಿಂದ ಬಾಗಲಕೋಟೆಗೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಗ್ರಾಮಲೆಕ್ಕಾಧಿಕಾರಿ ವಿಠ್ಠಲ, 1 ಕೋಟಿ 10 ಲಕ್ಷ ಹಣ ಸಾಗಿಸುವ ವೇಳೆ ರಾಮದುರ್ಗ ಚೆಕ್‌ಪೋಸ್ಟ್ ಅಧಿಕಾರಿಗಳ ಬಲೆಗೆ ಬಿದ್ದಿದ್ದ‌.ಈ ಹಿನ್ನೆಲೆಯಲ್ಲಿ ‌ಗ್ರಾಮಲೆಕ್ಕಾಧಿಕಾರಿ ವಿಠ್ಠಲ ‌ಮನೆ, ಕಚೇರಿ ಮೇಲೂ ‌ದಾಳಿ ನಡೆದಿದೆ.

ಉಗರಗೋಳ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಸವದತ್ತಿ ತಾಲ್ಲೂಕಿನ ಉಗರಗೋಳದಲ್ಲಿರುವ ಗೋವಿಂದಪ್ಪ ಸಂಬಂಧಿಕರ ಫಾರ್ಮ್ ಹೌಸ್ ಮೇಲೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯಾಗಿದೆ. ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *