Breaking News

ಪಾರ್ಟಿ ಮಾಡಲು ಹೋದಾಗ. ಬಸ್ ಚಾಲಕ ನಿಗೂಢ ಸಾವು

ಬೆಳಗಾವಿ – ಗೆಳೆಯರ ಜೊತೆ ಪಾರ್ಟಿ ಮಾಡಲು ಹೋದಾಗ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನೊಪ್ಪಿದ ಘಟನೆ ಬೆಳಗಾವಿ ಪಕ್ಕದ ಹಿಂಡಲಗಾ ಸುಳಗಾ ಗ್ರಾಮದ ಹದ್ದಿಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಬೆಳಗಾವಿ ಮಹಾನಗರದ ಶಹಾಪೂರ್ ಪ್ರದೇಶದ ಬಶೀರ್ ಚಿಕ್ಕೋಡಿ ಅಳ್ವಾನ್ ಗಲ್ಲಿಯ ನಿವಾಸಿ ಎಂದು ಗುರುತಿಸಲಾಗಿದೆ.

KSRTC ಬಸ್ ಚಾಲಕನಾಗಿದ್ದ ಬಶೀರ್ ಚಿಕ್ಕೋಡಿ ಇಂದು ಗೆಳೆಯರ ಜೊತೆ ಸೇರಿಕೊಂಡು ಹಿಂಡಲಗಾ ಸುಳಗಾ ಹತ್ತಿರ ಪಾರ್ಟಿ ಮಾಡಲು ಹೋಗಿದ್ದ ಈ ಸಂಧರ್ಭದಲ್ಲಿ ಬಶೀರ್ ಮೃತಪಟ್ಡಿದ್ದಾನೆ ಆತನ ಶವವನ್ನು ಆತನ ಗೆಳೆಯರು ಜಿಲ್ಲಾ ಆಸ್ಪತ್ರೆಗೆ ತಂದಿದ್ದಾರೆ.ಮೃತಪಟ್ಡ ವ್ಯಕ್ತಿಯ ಕುಟುಂಬದವರಿಗೂ ಸಾವಿನ ವಿಷಯವನ್ನು ತಿಳಿಸಿದ್ದಾರೆ.

ಬಶೀರ್ ಚಿಕ್ಕೋಡಿಯ ಕುಟುಂಬಸ್ಥರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಪೋಲೀಸರು ತನಿಖೆ ನಡೆಸಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *