ಬೆಳಗಾವಿ-ಲೇಡಿ ಪೋಟೋ ಇಟ್ಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಫೋಟೋಗ್ರಾಫರ್ ನನ್ನು ಅಪಹರಿಸಿ ಆತನ ಮೇಲೆ ಹಲ್ಲೆ ಮಾಡಿದ ಎಂಟು ಜನರನ್ನು ಬೆಳಗಾವಿಯ ಮಾಳಮಾರುತಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ.
ಮಹಿಳೆಯ ಫೋಟೊ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಆರೋಪದ ಮೇಲೆ,ಫೋಟೋಗ್ರಾಫರ್ನನ್ನು ಅಪಹರಿಸಿ ಹಲ್ಲೆಗೈದು ಜೀವ ಬೆದರಿಕೆ ಹಾಕಿದ್ದ ಎಂಟು ಜನ ಆರೋಪಿಗಳು ಜೈಲಿಗೆ ಹೋಗಿದ್ದಾರೆ.
ಬೈಲಹೊಂಗಲ ತಾಲೂಕಿನ ಮುರಕಿಬಾವಿ ಗ್ರಾಮದ ಉಮೇಶ ಹೊಸೂರು ಅಪಹರಕ್ಕೆ ಒಳಗಾಗಿ ಹಲ್ಲೆಗೊಳಗಾದ ಫೋಟೋಗ್ರಾಫರ್ ಆಗಿದ್ದಾನೆ.ಪ್ರಕರಣ ಸಂಬಂಧ ಬಸವರಾಜ್ ನರಟ್ಟಿ, ಪ್ರವೀಣ ಉಮರಾಣಿ, ವಿಕ್ಕಿ, ತಾರಾ ನರಟ್ಟಿ, ಲಕ್ಷ್ಮಿ ನರಟ್ಟಿ ಸೇರಿ ಎಂಟು ಜನರನ್ನು ಬಂಧಿಸಿದ ಬೆಳಗಾವಿ ಮಾಳಮಾರುತಿ ಠಾಣೆ ಪೊಲೀಸರು ಎಂಟು ಜನ ಆರೋಪಿಗಳನ್ನು ಜೈಲಿಗೆ ಕಳುಹಿಸಿದರು.
ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಬಸವರಾಜ್ ನರಟ್ಟಿಗೆ ಸೇರಿದ ಸ್ಟುಡಿಯೋದಲ್ಲಿ ಕೆಲಸ ಮಾಡ್ತಿದ್ದ ಉಮೇಶ,12 ವರ್ಷಗಳ ಕಾಲ ಬಸವರಾಜ್ ನರಟ್ಟಿ ಸ್ಟುಡಿಯೋದಲ್ಲಿ ಕೆಲಸ ಮಾಡ್ತಿದ್ದ ಉಮೇಶ,ಸರಿಯಾಗಿ ಸಂಬಳ ಕೊಡ್ತಿಲ್ಲವೆಂದು ಕಳೆದ ವರ್ಷ ಕೆಲಸ ಬಿಟ್ಟು ಸ್ವಂತ ಸ್ಟುಡಿಯೋ ತೆರೆದಿದ್ದ ,ಮದುವೆ, ಗೃಹ ಪ್ರವೇಶಗಳ ಆರ್ಡರ್ ಹಿಡಿದು ವಿಡಿಯೋಗ್ರಾಫಿ ಮಾಡುತ್ತಿದ್ದ,
ಎರಡು ದಿನಗಳ ಹಿಂದೆ ಬೆಳಗಾವಿಯ ಕೆಪಿಟಿಸಿಎಲ್ ಹಾಲ್ನಲ್ಲಿ ನಡೆಯುತ್ತಿದ್ದ ಮದುವೆ ಆರ್ಡರ್ ಹಿಡಿದಿದ್ದ ಉಮೇಶನನ್ನು,ಲಕೆಪಿಟಿಸಿಎಲ್ ಹಾಲ್ಗೆ ಬಂದ ವಿಕ್ಕಿ ಎಂಬಾತ ಉಮೇಶನನ್ನು ತನ್ನ ಕಾರಿನ ಕಡೆಗೆ ಕರೆದೊಯ್ದು ಅಪಹರಣ ಮಾಡಿದ್ದ ಅಂಶ ಬೆಳಕಿಗೆ ಬಂದಿದೆ.ಚಿವಟಗುಂಡಿ ಕ್ರಾಸ್ ಬಳಿ ವಾಹನ ನಿಲ್ಲಿಸಿ ಕಬ್ಬಿನ ರಾಡ್ನಿಂದ ವಿಕ್ಕಿಯಿಂದ ಉಮೇಶ ಮೇಲೆ ಹಲ್ಲೆ ಮಾಡಲಾಗಿದೆ.
ಬಳಿಕ ಬೈಲಹೊಂಗಲದ ಬಸವರಾಜ್ ನರಟ್ಟಿ ಸಂಬಂಧಿಕರ ಮನೆಗೆ ಉಮೇಶನನ್ನು ಕರೆದೊಯ್ದ ಆರೋಪಿಗಳು,ನಮ್ಮ ಮನೆಯ ಹೆಣ್ಣಮಗಳಾದ ತಾರಾ ಫೋಟೊವನ್ನು ನಿನ್ನ ಬಳಿ ಏಕೆ ಇಟ್ಟುಕೊಂಡಿರುವೆ ಎಂದು ಹಲ್ಲೆ ಮಾಡಿದ್ದಾರೆ.ತಾರಾ ನರಟ್ಟಿ, ಬಸವರಾಜ್ ನರಟ್ಟಿ, ಲಕ್ಷ್ಮಿ ನರಟ್ಟಿಯಿಂದಲೂ ಉಮೇಶ ಮೇಲೆ ಹಲ್ಲೆ ನಡೆದಿದೆ.ಜೀವಬೆದರಿಕೆ ಹಾಕಿ ಉಮೇಶನನ್ನು ಕಳುಹಿಸಿರುವ ಆರೋಪಿಗಳು ಈಗ ಖಾಕಿ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮಾಳಮಾರುತಿ ಠಾಣೆಯಲ್ಲಿ ದೂರು ದಾಖಲಿಸಿರುವ ಉಮೇಶ,ಹಳೇ ದ್ವೇಷಕ್ಕೆ ಹಲ್ಲೆ ಮಾಡಿ, ಈಗ ಮಹಿಳೆಯ ಫೋಟೊ ಇದೆ ಎಂದು ಸುಳ್ಳು ಕಥೆ ಕಟ್ಟುತ್ತಿದ್ದಾರೆಂದು ಉಮೇಶ ಆರೋಪ ಮಾಡಿದ್ದಾನೆ.ಉಮೇಶ ನೀಡಿದ ದೂರಿನ ಆಧರಿಸಿ ಎಂಟು ಜನರನ್ನು ಬಂಧಿಸಿ ಜೈಲಿಗಟ್ಟಿರುವ ಪೊಲೀಸರು ತನಿಖೆ ನಡೆಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ