Breaking News

ಬೆಳಗಾವಿಯ ಮಾಲಿನ್ಯ ಕಚೇರಿಗೆ ಮುತ್ತಿಗೆ ಆತ್ಮಹತ್ಯೆಗೆ ಯತ್ನ

 

ಬೆಳಗಾವಿ-ಬೆಳಗಾವಿಯ ಪರಿಸರ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಕಾರ್ಮಿಕರು ಸಾಮೂಹಿಕ ‌ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ನೇಣು ಹಗ್ಗ ಹಾಕಿಕೊಂಡು ನಿಂತಿರೋ 50ಕ್ಕೂ ಹೆಚ್ಚು ಕಾರ್ಮಿಕರು,ಬ್ರಹ್ಮಾನಂದ ಸಾಗರ್ ಜಾಗ್ರಿ ಇಂಡಸ್ಟ್ರಿ ಮತ್ತು ಅಶಕಿನ್ಸ್ ಬಯೋಪಿಲ್ಸ್ ಕಾರ್ಖಾನೆ ಸಿಬ್ಬಂದಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಇರೋ ಕಾರ್ಖಾನೆ ಇದಾಗಿದೆ. 300ಕ್ಕೂ ಹೆಚ್ಚು ಕಾರ್ಖಾನೆ ಕಾರ್ಮಿಕರು ಕಚೇರಿಗೆ ಮುತ್ತಿಗೆ ಹಾಕಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬೆಳಗಾವಿ ಆಟೋ ನಗರದಲ್ಲಿ ಪರಿಸರ ನಿಯಂತ್ರಣ ಮಂಡಳಿ ಕಚೇರಿಗೆ ಮುತ್ತಿಗೆ ಹಾಕಿರುವ ಕಾರ್ಮಿಕರು
ಕಳೆದ ಮೂರು ವರ್ಷಗಳಿಂದ ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.ಕಚೇರಿಗೆ ಬೀಗಿ ಹಾಕಿ, ನೇಣು ಹಗ್ಗ ಹಾಕಿಕೊಂಡು ನಿಂತ ಕಾರ್ಮಿಕರು.
ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಒತ್ತಡದಿಂದ ಅನುಮತಿ ನೀಡುತ್ತಿಲ್ಲ ಎನ್ನುವ ಆರೋಪಿಸಿದ್ದಾರೆ.

150 ಕೋಟಿ ಬಂಡವಾಳ ಹೂಡಿಕೆ ಮಾಡಿರೋ ಕಾರ್ಖಾನೆ ಮಾಲೀಕರು.ಕಳೆದ ಮೂರು ವರ್ಷಗಳಿಂದ ಅನುಮಾತಿಗಾಗಿ ಕಾಯುತ್ತಿದ್ದು ಮಾಲೀಕ ಅಶೋಕ ಅಸ್ಕಿ ಆಗಿದ್ದು ಈಗ ಮಾಲಿಕನ ಪರವಾಗಿ ಅನುಮತಿಗಾಗಿ ಕಾರ್ಮಿಕರು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *