Breaking News

ಕಂಡೆಕ್ಟರ್ ಮೇಲೆ ಹಲ್ಲೆ ಮೂವರ ಬಂಧನ

ಬೆಳಗಾವಿ-ಮರಾಠಿ ಮಾತನಾಡದ ಬಸ್ ನಿರ್ವಾಹಕ‌ನ ಮೇಲೆ ಪುಂಡರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಮಾರಿಹಾಳ ಠಾಣೆ ‌ಪೊಲೀಸರು ಓರ್ವ ಅಪ್ರಾಪ್ತ ಸೇರಿ ನಾಲ್ವರು ಆರೋಪಿಗಳು ಬಂಧಿಸಿದ್ದಾರೆ.

ಮಾರುತಿ ತುರುಮುರಿ, ರಾಹುಲ್ ರಾಜು ನಾಯ್ಡು, ಬಾಳು ಗೋಜಗೇಕರ್ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರೆಲ್ಲರೂ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದವರಾಗಿದ್ದಾರೆ.ಕನ್ನಡ ಪರ ಸಂಘಟನೆಗಳ ಸದಸ್ಯರ ಆಕ್ರೋಶದ ಬೆನ್ನಲ್ಲೇ ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಮಾಡಲಾಗಿದೆ.ಮೂವರಿಗೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ‌ ಆದೇಶ ಮಾಡಲಾಗಿದೆ.ಕೋರ್ಟ್‌ಗೆ ಹಾಜರುಪಡಿಸುವ ಮುನ್ನ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗಿದೆ.ಬಳಿಕ ಪುಂಡಾಟ ಮೆರೆದವರನ್ನು ಹಿಂಡಲಗಾ ‌ಜೈಲಿಗೆ ರವಾನಿಸಲಾಗಿದೆ.

Check Also

ಕೆಎಂಎಫ್ ಅಧ್ಯಕ್ಷ ಸ್ಥಾನದ ರೇಸ್ ಲ್ಲಿ ನಾನಿಲ್ಲ.ನಾನು ಆಂಕಾಂಕ್ಷಿಯೂ ಅಲ್ಲ,ಸ್ಪರ್ದೆಯೂ ಮಾಡೋದಿಲ್ಲ…

ಬೆಳಗಾವಿ-ಮುಂದೆ ನಡೆಯುವ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ಕೆಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಗಳು ಕೇವಲ …

Leave a Reply

Your email address will not be published. Required fields are marked *