Breaking News

ಖಾರದಪುಡಿ ಎರಚಿ ಚಿನ್ನ ದೋಚಿದ ಖದೀಮ ಅರೆಸ್ಟ್….

ಮನೆಗೆ ನುಗ್ಗಿ ಒಂಟಿ ಮಹಿಳೆ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ದೋಚಿದ್ದವನ ಬಂಧನ

ಬೆಳಗಾವಿ : ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ಲೂಟಿ ಮಾಡಿದ್ದ ದರೋಡೆಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯ ಶಾಸ್ತ್ರಿನಗರ ನಿವಾಸಿ ಸ್ವಾಗತ ಢಾಪಳೆಯನ್ನು ಈ ಪ್ರಕರದಲ್ಲಿ ಉದ್ಯಮಭಾಗ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಳೆದ ಜನವರಿ 27ರಂದು ಬೆಳಗಾವಿಯ ರಾಣಿ ಚನ್ನಮ್ಮ ನಗರದ ಎರಡನೇ ಕ್ರಾಸ್‌ನಲ್ಲಿ ಒಂಟಿ ಮಹಿಳೆ ಇದ್ದ ಮನೆಯೊಂದಕ್ಕೆ ನುಗ್ಗಿದ್ದ ದರೋಡೆಕೋರ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದನು.

ಬಂಧಿತ ದರೋಡೆಕೋರನಿಂದ 3 ಲಕ್ಷ 50 ಸಾವಿರ ಮೌಲ್ಯದ 52 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಹೀರೋ ಹೋಂಡಾ ಪ್ಯಾಶನ್ ಪ್ಲಸ್ ಬೈಕ್ ಜಪ್ತಿ ಮಾಡಲಾಗಿದೆ.ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *