Breaking News

ಬೆಂಗಳೂರಿಗೆ ಹಾರಿದ ಹುಕ್ಕೇರಿ ಸಾಹುಕಾರ್…!!

ಬೆಳಗಾವಿ -ಶೀಘ್ರದಲ್ಲೇ ರಾಜ್ಯ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.ಹುಕ್ಕೇರಿ ಸಾಹುಕಾರ್ ಉಮೇಶ್ ಕತ್ರಿ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಿಂದ ರಾಜಧಾನಿ ಬೆಂಗಳೂರಿಗೆ ಹಾರಿದ್ದಾರೆ.

ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿದ ಉಮೇಶ ಕತ್ತಿ ಅವರಿಗೆ ಸಿಎಂ ಬುಲಾವ್ ಬಂದಿದ್ದು ಈ ಹಿನ್ನೆಲೆಯಲ್ಲಿ ಉಮೇಶ ಕತ್ತಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಕರೆ ಮಾಡಿ ಬೆಂಗಳೂರಿಗೆ ಬರಲು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೊರಟ್ಟಿದ್ದೇನೆ. ಸಂಪುಟದಲ್ಲಿ ಅವಕಾಶ ಕೊಡೊದು ಬಿಡೋದು ಸಿಎಂ ಬಿಟ್ಟದ್ದು. ಅವಕಾಶ ಕೊಟ್ಟರೇ ಸಮರ್ಥವಾಗಿ ಕೆಲಸ ಮಾಡುತ್ತೇನೆ.ಎಂದು ಉಮೇಶ್ ಕತ್ತಿ ಹೇಳಿದರು.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *