ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತೀನಿ- ಸಿಎಂ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ನಂದನಗಡ ಗ್ರಾಮದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಸ್ಥಳಕ್ಕೆ ಪಕ್ಕಾ ಬರ್ತಿನಿ ಎಂದು ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಭರವಸೆ ನೀಡಿದ್ದಾರೆ‌.

ಇಂದು ಬೆಳಗ್ಗೆ ಮಾನ್ಯ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಮಾನ್ಯ ಮುಖ್ಯಮಂತ್ರಿ ಅವರನ್ನು ಮುಖ್ಯಮಂತ್ರಿ ಕಛೇರಿಯಲ್ಲಿ ಭೇಟಿಯಾದರು. ತಾಲೂಕಿನ ಸಮಸ್ಯೆಗಳ ಬಗ್ಗೆ ಚರ್ಚಿಸಿದರು ಹಾಗೂ ಇದೆ ಸಂದರ್ಭದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ ಪರಿಹಾರ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು

ಇದಕ್ಕೆ ಮಾನ್ಯ ಮುಖ್ಯಮಂತ್ರಿ ರವರು ಆದಷ್ಟು ಬೇಗ ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಹಾಗೂ ಖಾನಾಪೂರ ತಾಲೂಕಿಗೆ ಮಾನ್ಯ ಮುಖ್ಯಮಂತ್ರಿ ರವರು ಭೇಟಿ ನೀಡಬೇಕೆಂದು ಮನವಿ ಮಾಡಿದಾಗ ಮಾನ್ಯ ಮುಖ್ಯಮಂತ್ರಿ ರವರು ಪಕ್ಕಾ ಭೇಟಿ ನೀಡುವುದಾಗಿ ಹೇಳಿದರು ಬೇಟಿ ನೀಡಿದ ಸಂದರ್ಭದಲ್ಲಿ ನಂದಗಡ್ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಸಮಾಧಿಗೆ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ರವರು ಹೇಳಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *