ಕಿತ್ತೂರ ಉತ್ಸವಕ್ಕೆ ಬರ್ತಿನಿ,ರಾಜ್ಯೋತ್ಸವ ಮೆರವಣಿಗೆ ಬಗ್ಗೆ ವಿಚಾರ ಮಾಡ್ತೀನಿ….

ಬೆಳಗಾವಿ- ಸಿಎಂ ಬಸವರಾಜ ಬೊಮ್ಮಾಯಿ ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮುಗಿಸಿ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿದ್ರು

ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಈಗಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‌ಗೆ ವಾಪಾಸ್ ಆಗ್ತೇನಿ. ಮೂರು ದಿನಗಳ ಕಾಲ ಹಾನಗಲ್ ನಲ್ಲಿ ಪ್ರಚಾರ ಮಾಡುತ್ತೇನೆ.23ರಂದು ಬೆಳಗಾವಿಗೆ ಬಂದು ಕಿತ್ತೂರು ಚನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ. ಎಂದು ಸಿಎಂ ಹೇಳಿದ್ರು.

ಎರಡು ಕ್ಷೇತ್ರಗಳಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ.ಅದ್ದೂರಿ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ.ಅದರ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದ ಸಿಎಂ ಬಸವರಾಜ ಬೊಮ್ಮಾಯಿ.
ಕೊವಿಡ್ ಕಡಿಮೆಯಾದ ಹಿನ್ನೆಲೆ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ.
ತಜ್ಞರ ಜತೆಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಕಿತ್ತೂರ ಕರ್ನಾಟಕ ಘೋಷಣೆ ವಿಚಾರವಾಗಿ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ತೀರ್ಮಾನ ಆಗಬೇಕು ಎಂದುಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *