Breaking News

ಸ್ನಾನಕ್ಕೆ ತೆರಳಿದ ಯುವಕ ನೀರು ಪಾಲು…

ಬೆಳಗಾವಿ-ಶ್ರಾವಣ ಮಾಸ ಕೊನೆ ದಿನ ಹಿನ್ನೆಲೆ ನದಿ ಸ್ನಾನಕ್ಕೆ ತೆರಳಿದ್ದ ಯುವಕ ನೀರು ಪಾಲಾಗಿದ್ದಾನೆ.ಹಲ್ಯಾಳ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಈ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಯುವಕ ನೀರು ಪಾಲಾಗಿದ್ದು ಗ್ರಾಮಸ್ಥರು ನದಿ ತೀರದಲ್ಲಿ ಜಮಾವಣೆಯಾಗಿದ್ದಾರೆ.
ಅಥಣಿ ಪಟ್ಟಣದ ನಿವಾಸಿ ಸಾಗರ ರಾಜು ಹೊನಕಟ್ಟಿ (೨೩) ಯುವಕ ನದಿ ಪಾಲಾದ ಯುವಕ.ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದ್ದರಿಂದ ಅವಘಡ ಸಂಭವಿಸಿದೆ.

ಅಗ್ನಿಶಾಮಕದಳ ಹಾಗೂ ಪೊಲೀಸ್ ಇಲಾಖೆಯಿಂದ ನದಿಯಲ್ಲಿ ಯುವಕನ ಶೋಧ ಕಾರ್ಯ ನಡೆಸಿದ್ದಾರೆ.ನಾಲ್ಕೈದು ಸ್ನೇಹಿತರ ಜೊತೆ ಬಂದಿದ್ದ ಯುವಕ ಇದರಲ್ಲಿ ಒರ್ವ ನೀರು ಪಾಲಾಗಿದ್ದಾನೆ.ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *