ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಪಲ್ಟಿ,…

ಬೆಳಗಾವಿ – ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಕಾರು ಪಲ್ಟಿಯಾಗಿದ್ದು,ಲಕ್ಷ್ಮಣ ಸವದಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಸವದಿ ಅವರ ಕಾರು ಪಲ್ಟಿಯಾಗಿದ್ದು ಲಕ್ಷ್ಮಣ ಸವದಿ ಅವರಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ.ಲಕ್ಷ್ಮಣ ಸವದಿ ಅವರು ಸುರಕ್ಷಿತವಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ತಿಳಿದು ಬಂದಿದ್ದು,ಸಾರ್ವಜನಿಕರು ಲಕ್ಷ್ಮಣ ಸವದಿ ಅವರನ್ನು ಕಾರಿನಿಂದ ಹೊರತೆಗೆದಿದ್ದು,ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

 

ಇಂದು ಮಧ್ಯಾಹ್ನ 2-30 ರ ಸುಮಾರಿಗೆ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ ರವರು ಅಥಣಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ಹೋಗಿ ಅಲ್ಲಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಅಥಣಿಯಿಂದ ಹಾರೂಗೇರಿ ಮಾರ್ಗವಾಗಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಹಾರೂಗೇರಿ ಹತ್ತಿರ ಗಸ್ತಿ ತೋಟದ ಶಾಲೆಯ ಹತ್ತಿರ ಎದುರುಗಡೆ ಬೈಕ ಸವಾರರು ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ಇರುವ ಕಾಲುವೆಯಲ್ಲಿ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿ ಚಾಲಕ ರಾಜು, ಗನ್ ಮ್ಯಾನ ,ಹಾಗೂ ಲಕ್ಷ್ಮಣ ಸವದಿ ರವರು ಇದ್ದು ಯಾರಿಗೂ ಯಾವುದೇ ಜೀವ ಹಾನಿ ಆಗಿರುವುದಿಲ್ಲ ಲಕ್ಷ್ಮಣ ಸವದಿ ರವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಹಾರೂಗೇರಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *