Breaking News
Home / Breaking News / ಬೆಳಗಾವಿಯಲ್ಲಿ ಜಾನುವಾರಗಳಿಗೆ ರೋಗ ಬಂದಿದೆ ಹುಷಾರ್…!!!

ಬೆಳಗಾವಿಯಲ್ಲಿ ಜಾನುವಾರಗಳಿಗೆ ರೋಗ ಬಂದಿದೆ ಹುಷಾರ್…!!!

*ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ*

ಬೆಳಗಾವಿ,  ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ.

ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ ದಿನಗಳಲ್ಲಿ ಹೆಚ್ಚಾಗಿ ಈ ರೋಗವು ಪಸರಿಸುತ್ತದೆ.

*ಚರ್ಮಗಂಟು ರೋಗದ ಲಕ್ಷಣಗಳು:*

• ಅತಿಯಾದ ಜ್ವರ (೧೦೫-೧೮೦ಈ)ಕಣ್ಣುಗಳಿಂದ ನೀರು ಸೋರುವುದು.
• ನಿಶಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕಂಟುವುದು
• ಜಾನುವಾರುಗಳ ಚರ್ಮದ ಮೇಲೆ ೨-೫ ಸೆ.ಮೀ.ನಷ್ಟು ಅಗಲವಿರುವ ಗುಳ್ಳೆ ಕಾಣಿಸಿಕೊಂಡು ನಂತರ ಒಡೆದು ಗಾಯವಾಗಿ ನೋವುಂಟಾಗುತ್ತದೆ. ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ನೊಣಗಳಿಂದ ಹುಳುಗಳು ಬಿದ್ದು ಹುಣ್ಣಾಗುತ್ತದೆ.
• ಹಾಲಿನ ಇಳುವರಿ ಕಡಿಮೆಯಾಗುವುದು ಕೆಲಸದ ಸಾಮರ್ಥ್ಯ ಕುಂಠಿತವಾಗುತ್ತದೆ. ಕರುಗಳು ತೀವ್ರವಾಗಿ ಬಳಲಿ ಸಾವಿಗೀಡಾಗಬಹುದು.
• ಮಿಶ್ರತಳಿ ಜರ್ಸಿ,ಹೆಚ್.ಎಫ್. ರಾಸುಗಳು ಹಾಗೂ ಕರುಗಳು ಈ ರೋಗದಿಂದ ಹೆಚ್ಚು ಬಳಲುತ್ತವೆ
ರೋಗ ಹರಡುವಿಕೆ:
• ಸೊಳ್ಳೆ, ಉಣ್ಣೆ , ನೊಣ ಹಾಗೂ ವಿವಿಧ ಕಚ್ಚುವ ಕೀಟಗಳಿಂದ
• ಕಲುಷಿತಗೊAಡ ನೀರು ಹಾಗೂ ಆಹಾರದಿಂದ
• ಜಾನುವರುಗಳ ನೇರ ಸಂಪರ್ಕದಿAದ
• ರೋಗ ಹರಡುವಿಕೆ ಪ್ರಮಾಣ ೧೦-೨೦%ರಷ್ಟು ಹಗೂ ರೋಗದ ಸಾವಿನ ಪ್ರಮಾಣ ೧-೫% ಇರುತ್ತದೆ.

*ಚರ್ಮಗಂಟು ರೋಗದ ಚಿಕಿತ್ಸೆ ಹಾಗೂ ತಡೆಗಟ್ಟುವಿಕೆ:*

• ಈ ರೋಗವು ವೈರಾಣು ರೋಗವಾಗಿರುವುದರಿಂದ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಹಾಗೂ ಈ ರೋಗಕ್ಕೆ ಯಾವುದೇ ಲಸಿಕೆ ಲಭ್ಯವಿರುವುದಿಲ್ಲ
• ಜಾನುವಾರುಗಳಿಗೆ ರೋಗದ ಲಕ್ಷಣಗಳ ತಕ್ಕಂತೆ ಚಿಕಿತ್ಸೆ ನೀಡಬೇಕಾಗುತ್ತದೆ.
• ದೇಹವನ್ನು ತಂಪಾಗಿಸಲು ಮೈಮೇಲೆ ಹಸಿ ಬಟ್ಟೆ ಹಾಕುವುದು ಹಾಗೂ ತಂಪಾದ ಜಾಗದಲ್ಲಿ ಕಟ್ಟುವುದು
• ಚರ್ಮದ ಮೇಲಿನ ಗಾಯಗಳಿಗೆ ಪೋಟ್ಯಾಶಿಯಂ ಪರಮಾಂಗನೇಟ್ ದ್ರಾವಣದಿಂದ ತೊಳೆದು ಐಯೋಡಿನ್ ದ್ರಾವಣ, ಮುಲಾಮು ಹಾಗೂ ಬೇವಿನ ಎಣ್ಣೆ ಲೇಪಿಸುವುದು
• ರೋಗ ಹರಡುವುದನ್ನು ತಡೆಯಲು ರೋಗಗ್ರಸ್ಥ ಜಾನುವಾರುಗಳನ್ನು ಬೇರ್ಪಡಿಸುವುದು
• ರೋಗಗ್ರಸ್ಥ ಜಾನುವಾರುಗಳಿಗೆ ಉಪಯೋಗಿಸಿದ ಎಲ್ಲಾ ಸಾಮಗ್ರಿಗಳನ್ನು ಸ್ವಚ್ಛಗೊಳಿಸುವುದು
• ಹಸಿರು ಮೇವು, ಪೌಷ್ಠಿಕ ಆಹಾರ ಹಾಗೂ ಲವಣ ಮಿಶ್ರಣ ನೀಡಬೇಕು
• ಕುಡಿಯುವ ನೀರಿನಲ್ಲಿ ಬೆಲ್ಲ, ಉಪ್ಪು ಹಾಗೂ ಅಡುಗೆ ಸೋಡಾ ಹಾಕಿ ದಿನಕ್ಕೆ ೫-೬ ಬಾರಿ ಕುಡಿಸಬೇಕು
• ಕೀಟಗಳ ಹಾವಳಿ ತಪ್ಪಿಸಲು ಹಸಿಬೇವಿನ ಸೊಪ್ಪಿನ ಹೊಗೆ ಹಾಕಬೇಕು
• ಈ ರೋಗವು ಸೊಳ್ಳೆ, ಉಣ್ಣೆ, ನೊಣ ಹಾಗೂ ಇತರೆ ಕೀಟಗಳಿಂದ ಮುಖ್ಯವಾಗಿ ಹರಡುವುದರಿಂದ ಕೊಟ್ಟಿಗೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಬೇಕು ಹಾಗೂ ಫಾರ್ಮಾಲಿನ್(೧%)ಫಿನೈಲ್(೨%) ಅಥವಾ ಸೋಡಿಯಂ ಹಾಪೀಕ್ಲೊರೈಡ್ (೨%) ದಿನಕ್ಕೆ ೨ ಬಾರಿ ಸಿಂಪಡಿಸಬೇಕು
• ರೋಗಗ್ರಸ್ಥ ಜಾನುವಾರು ಮರಣ ಹೊಂದಿದ್ದಲ್ಲಿ ಆಳವಾದ ಗುಂಡಿಯಲ್ಲಿ ಹೂಳಬೇಕು ಹಾಗೂ ಹೆಚ್ಚಿನ ಮಾಹಿತಿ, ಚಿಕಿತ್ಸೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಯನ್ನು ಸಂಪರ್ಕಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ಡಾ: ರಾಜೀವ ಎನ್, ಕೂಲೇರ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
***

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *