Breaking News

ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರ ಮುಖಕ್ಕೆ ಕಪ್ಪು ಮಸಿ ಎರಚಿದ್ರು…!!

ಬೆಳಗಾವಿ-ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಮಸಿ ಬಳಿದ ಘಟನೆ ಇಂದು ಮಹಾರಾಷ್ಟ್ರದ ಪೂನೆಯಯಲ್ಲಿ ನಡೆದಿದೆ.

ಚಂದ್ರಕಾಂತ ಪಾಟೀಲ ಅವರು ಮಹಾಪುರುಷರ ಕುರಿತು ಹಗುರವಾಗಿ ಮಾತನಾಡಿದ್ದನ್ನು ಖಂಡಿಸಿ, ಕಾರ್ಯಕರ್ತನೊಬ್ಬ ಸಚಿವ ಚಂದ್ರಕಾಂತ ಪಾಟೀಲ ಅವರ ಮುಖಕ್ಕೆ ಕಪ್ಪು ಮಸಿ ಎರೆಚಿ ಪರಾರಿಯಾಗುತ್ತಿದ್ದಾಗ ಪೋಲೀಸ್ರು ಆತನನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರದ ಗಡಿ ಉಸ್ತುವಾರಿ ಸಚಿವ ಚಂದ್ರಕಾಂತ ಪಾಟೀಲ ಅವರು ಬೆಳಗಾವಿ ಗಡಿವಿವಾದದ ಕುರಿತು ಬೆಳಗಾವಿಗೆ ಭೇಟಿ ನೀಡಲು ನಿರ್ಧರಿಸಿದ್ದರು. ಆದ್ರೆ ಬೆಳಗಾವಿ ಜಿಲ್ಲಾಡಳಿತ ಬೆಳಗಾವಿ ಗಡಿ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನಲೆಯಲ್ಲಿ ಚಂದ್ರಕಾಂತ ಪಾಟೀಲ ಬೆಳಗಾವಿ ಭೇಟಿಯನ್ನು ಕೈಬಿಟ್ಟಿದ್ಸರು.

Check Also

ಮಹಾರಾಷ್ಟ್ರದ ನಾಗಪೂರದಲ್ಲಿ ಬೆಳಗಾವಿ ಗ್ರಾಮೀಣದ ನಾಗೇಶ್…!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಮುಖಂಡ,ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್ ಮುನ್ನೋಳಕರ ಕಾಲಿಗೆ ಚಕ್ರ ಕಟ್ಟಕೊಂಡು …

Leave a Reply

Your email address will not be published. Required fields are marked *