Breaking News

ಬೆಳಗಾವಿ ಜಿಲ್ಲೆಯ ಮೂವರು ಅಧಿಕಾರಿಗಳ ಮನೆಯ ಮೇಲೆ RAID…RAID….!!

ಬೆಳಗಾವಿ – ಇವತ್ತು ಬೆಳ್ಳಂ ಬೆಳಿಗ್ಗೆ ಬ್ರಷ್ಟ ಅಧಿಕಾರಿಗಳಿಗೆ ಎಸಿಬಿ ಬಿಗ್ ಶಾಕ್ ಕೊಟ್ಟಿದೆ ಬೆಳಗಾವಿ,ಬೈಲಹೊಂಗಲ,ಗೋಕಾಕಿನ ಒಟ್ಟು ಮೂರು ಜನ ಅಧಿಕಾರಿಗಳ ಮನೆಯ ಮೇಲೆ ಎಸಿಬಿ ರೇಡ್ ಮಾಡಿದೆ.

ಬೆಳಗಾವಿ: ಭ್ರಷ್ಟ ಅಧಿಕಾರಿಗಳಿಗೆ ಬೆಳಂಬೆಳಗ್ಗೆ ಶಾಕ್ ಕೊಟ್ಟಿರುವ ಎಸಿಬಿ ಅಧಿಕಾರಿಗಳು ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿದ್ದಾರೆ.
ಜಿಲ್ಲೆಯ ಮೂವರು ಭ್ರಷ್ಟ ಅಧಿಕಾರಿಗಳ ಹಾಗೂ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಆರ್ ಟಿ ಓ ಸದಾಶಿವ ಮರಲಿಂಗಣ್ಣವರ್ ಮನೆ ಹಾಗೂ ಕಚೇರಿ ಸೇರಿ ಒಟ್ಟು 6 ಕಡೆ ದಾಳಿ ನಡೆಸಲಾಗಿದೆ. ಸದಾಶಿವ ಆರ್‌ಟಿಓದಲ್ಲಿ ಮೋಟಾರ್ ವೈಕಲ್ ಇನ್ಸಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೈಲಹೊಂಗಲ ಪಟ್ಟಣದ ಅಡಿವಿಸಿದ್ದೇಶ್ವರ ಮಾಸ್ತಿ ಎಂಬ ಅಧಿಕಾರಿಯ ಮನೆ ಮೇಲೂ ದಾಳಿ ಆಗಿದೆ. ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಆಗಿರುವ ಅಡಿವೇಶ್ವರಗೆ ಸಂಬಂಧಿಸಿದ ಆಸ್ತಿಗಳ ಮೂರು ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿ ನಗರದ ನಾತಾಜಿ ಪಾಟೀಲ್ ಮನೆ ಕಚೇರಿ ಮೇಲೆ ದಾಳಿ ಆಗಿದೆ. ಇವರು ಹೆಸ್ಕಾಂ ನಲ್ಲಿ ಲೈನ್ ಮೆಕ್ಯಾನಿಕ್ ವಿಭಾಗದಲ್ಲಿದ್ದಾರೆ. ಇವರ ಕಚೇರಿ ಮನೆ ಸೇರಿ ಮೂರು ಕಡೆ ದಾಳಿ ಮಾಡಲಾಗಿದೆ.
ಎಸಿಬಿ ಎಸ್‌ಪಿ ಬಿ.ಎಸ್. ನೇಮಗೌಡ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

Check Also

ಈಜಲು ಹೋದ ಬಾಲಕ ನೀರು ಪಾಲು

ಬೆಳಗಾವಿ ಕೆರೆಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾದ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ತಾಲೂಕಿನ ವಾಘವಡೆ …

Leave a Reply

Your email address will not be published. Required fields are marked *