Breaking News

ಬೆಳಗಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆ: ಆತಂಕಗೊಂಡ ಜನ..

*ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದ್ದು, ಮಂಗಳವಾರ ದೇಹ ತೇಲುತ್ತಿರುವುದು ಕಂಡು ಗ್ರಾಮಸ್ಥರು ದಿಗ್ಭ್ರಮೆಯಾಗಿದ್ದಾರೆ.

ಸುಮಾರು 30 ವರ್ಷದ ಯುವಕನನ್ನು ಶಿರಚ್ಛೇದ ಮಾಡಿ ಕೊಲೆಗೈದು ರುಂಡ ಬೇರ್ಪಡಿಸಿ ದೇಹವನ್ನು ದುಷ್ಕರ್ಮಿಗಳು ಬಾವಿಯಲ್ಲಿ ಎಸೆದು ಹೋಗಿದ್ದಾರೆ. ಬೆಳಗ್ಗೆ ಹೊಲಕ್ಕೆ ಹೋದ ಗ್ರಾಮಸ್ಥರು ಇದನ್ನು ಕಂಡು ಆತಂಕಗೊಂಡಿದ್ದಾರೆ.

ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುನೀಲ ಅಷ್ಟೇಕರ ಎಂಬವರ ಹೊಲದ ಬಾವಿಯಲ್ಲಿ ರುಂಡ ಇಲ್ಲದ ದೇಹ ಪತ್ತೆಯಾಗಿದೆ. ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆಮ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲಿಸಿದರು. ಸುತ್ತಲೂ ಎಲ್ಲಾದರೂ ರುಂಡ ಎಸೆಯಲಾಗಿದೆಯೇ ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾರ್ಯ ನಡೆಸಿದ್ದಾರೆ.

ಮಾರೀಹಾಳ ಇನ್ಸಪೆಕ್ಟರ್ ಮಹಾಂತೇಶ ಬಸ್ಸಾಪುರೆ ಸೇರಿದಂತೆ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *