ಬೆಳಗಾವಿಯ ಬಿಜೆಪಿ ಕಾರ್ಯಕಾರಿಣಿಗೆ ,ತಯಾರಿ ಜೋರು….

ಬೆಳಗಾವಿ- ಬೆಳಗಾವಿಯಲ್ಲಿ ಡಿಸೆಂಬರ್ 5 ರಂದು ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಈ ಸಭೆಗೆ ಸಿಎಂ ಸೇರಿದಂತೆ ಬಿಜೆಪಿಯ ವರಿಷ್ಠರು ಭಾಗವಹಿಸಲಿದ್ದು,ಈ ಕುರಿತು ಬೆಳಗಾವಿಯಲ್ಲಿ ಸಿದ್ಧತೆಗಳು ಜೋರಾಗಿಯೇ ನಡೆದಿವೆ.

ಇಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತ್ರತ್ವದಲ್ಲಿ ಬೆಳಗಾವಿ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು ,ರಾಜ್ಯ ಬಿಜೆಪಿ ಕಾರ್ಯಕಾರಿಣೆ ಸಭೆಯನ್ನು ಬೆಳಗಾವಿಯ ಯಾವ ಸ್ಥಳದಲ್ಲಿ ನಡೆಸಬೇಕು ಎನ್ನುವದರ ಬಗ್ಗೆ ಬೆಳಗಾವಿಯ ಬಿಜೆಪಿ ನಾಯಕರು ಚರ್ಚೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಸಭೆಯಲ್ಲಿ ಬಿಜೆಪಿ ಜಿಲ್ಲಾ ಅದ್ಯಕ್ಷ. ಸಂಜಯ ಪಾಟೀಲ,ಬಿಜೆಪಿ ನಗರ ಜಿಲ್ಲಾದ್ಯಕ್ಷ ಶಶಿಕಾಂತ ಪಾಟೀಲ,ಬಿಜೆಪಿ ಮುಖಂಡ ಕಿರಣ ಜಾಧವ,ರಾಜು ಜಿಕ್ಕನಗೌಡ್ರ ಸೇರಿದಂತೆ ಬಿಜೆಪಿಯ ಪದಾಧಿಕಾರಿಗಳು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ಬೆಳಗಾವಿಯ ,ಗಾಂಧಿ ಭವನ,ಸಂಕಮ್ ಹೊಟೇಲ್, UK 27 , ಅಥವಾ ಪಂಚತಾರಾ ಹೊಟೇಲ್ ಮ್ಯಾರೀಯೇಟ್ ನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಸಬೇಕು ಎನ್ನುವ ಚಿಂತನೆ ನಡೆದಿದ್ದು ಸ್ಥಳ ಇನ್ನುವರೆಗೆ ಫೈನಲ್ ಆಗಿಲ್ಲ ಎಂದು ತಿಳಿದು ಬಂದಿದೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಇವತ್ತು ಬೆಳಗಾವಿಗೆ ಸಾಂಕೇತಿಕ ಭೇಟಿ ನೀಡಿದ್ದು ನಾಳೆ ಬೆಳಗಾವಿಯಲ್ಲಿ ಸಭೆ ನಡೆಸಿ ಸ್ಥಳವನ್ನು ಅಂತಿಮಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 5 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಮಹತ್ವದ್ದಾಗಿದ್ದು ಇದೇ ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿಯನ್ನೂ ಫೈನಲ್ ಮಾಡ್ತಾರೆ ಎಂದು ಹೇಳಲಾಗುತ್ತಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *