ರಮೇಶ ಜಾರಕಿಹೊಳಿ ರಾಜಿನಾಮೆಗೆ ಬಿಜೆಪಿ ಒತ್ತಾಯ

ಬೆಳಗಾವಿಯಲ್ಲಿ ಬಿಜೆಪಿ‌ ಜಿಲ್ಲಾಧ್ಯಕ್ಷ ವಿಶ್ವನಾಥ್ ಪಾಟೀಲ್ ಅವರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ರಾಜಿನಾಮೆ ನೀಡುವಂತೆ ಒತ್ತಾಯಿಸಿದ್ದಾರೆ

ಬೆಳಗಾವಿ ಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು
ಸಚಿವ ರಮೇಶ್ ಜಾರಕಿಹೊಳಿ ಮನೆ ಮೇಲೆ ಐಟಿ ದಾಳಿ ನಡೆದಿದೆ ೧೧೫ ಕೋಟಿ ಅಘೋಷಿತ ಆಸ್ತಿ‌ ಪತ್ತೆಯಾಗಿದೆ.ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಗೋವಾದಲ್ಲಿ ರಮೇಶ ಜಾರಕಿಹೊಳಿ ವಿಷಯ ಪ್ರಸ್ತಾಪಿಸಿದ್ದು ರಮೇಶ ಜಾರಕಿಹೊಳಿ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ವಿಶ್ವನಾಥ ಪಾಟೀಲ ಒತ್ತಾಯಿಸಿದ್ದಾರೆ
ಸಚಿವ ರಮೇಶ ಜಾರಕಿಹೊಳಿ ಐಟಿ ದಾಳಿಗೆ‌ ಪ್ರಧಾನಿ ಕಾರಣ ಎಂದು‌ ಹೇಳಿದ್ದಾರೆ ತಮ್ಮ ತಪ್ಪನ್ನು ಮುಚ್ಚಿಡಲು‌‌ ಪ್ರಧಾನಿ ಮೇಲೆ ಆರೋಪ ಮಾಡುತ್ತಿದ್ದಾರೆ. ಸಚಿವ ರಮೇಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ನಿರಾಧಾರ‌.ಎಂದು ಬಿಜೆಪಿ ಅಧ್ಯಕ್ಷರು ಪ್ರತ್ಯಾರೋಪ ಮಾಡಿದ್ದಾರೆ

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕಾರಿ ಸಭೆ.ನಡೆದಿದೆ ಸಭೆಯಲ್ಲಿ ಎರಡು ಪ್ರಮುಖ ನಿರ್ಣಯ ಅಂಗೀಕಾರ.ಮಾಡಲಾಗಿದೆ
ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆಗೆ‌ ಆಗ್ರಹ.
ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನ. ರಾಜ್ಯ ಕಾರ್ಯದರ್ಶಿ ಜಗದೀಶ ಹಿರೇಮನಿ ಹೇಳಿದ್ದಾರೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *