ನಾಳೆ ಬೆಳಗಾವಿಯಲ್ಲಿ ಬಿಜೆಪಿಯ ಮಹತ್ವದ ಸಭೆ…

ಬೆಳಗಾವಿ- ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,ನಾಳೆ ಬೆಳಗಾವಿ ನಗರಕ್ಕೆ ಆಗಮಿಸಲಿದ್ದು ,ಬಿಜೆಪಿ ನಾಯಕರ ಮಹತ್ವದ ಸಭೆ ನಡೆಯಲಿದೆ.

ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ,ಉಮೇಶ ಕತ್ತಿ ಅವರ ಪ್ರವಾಸದ ಪಟ್ಟಿಯಲ್ಲಿ ನಾಳೆ ನಳೀನ್ ಕುಮಾರ್ ಕಟೀಲು ಅವರು ಮದ್ಯಾಹ್ನ 3-30 ಕ್ಕೆ ನಗರದ ಸಂಕಮ್ ಹೊಟೇಲ್ ನಲ್ಲಿ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಉಮೇಶ್ ಕತ್ತಿ ಅವರು ಭಾಗವಹಿಸುತ್ತಾರೆ ಎಂದು ತಿಳಿಸಲಾಗಿದೆ.

ಬೆಳಗಾವಿ ಬಿಜೆಪಿ ನಾಯಕರ ಸಭೆಯಲ್ಲಿ ಲೋಕಸಭಾ ಉಪ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ನಾಳೆ ಬೈ ಇಲೆಕ್ಷನ್ ದಿನಾಂಕ ಪ್ರಕಟಿಸುವ ಸಾಧ್ಯತೆ…

ಚುನಾವಣಾ ಆಯೋಗ ,ನಾಳೆ ಪಶ್ಚಿಮ ಬಂಗಾಳದ ಚುನಾವಣೆಯ ದಿನಾಂಕ ಪ್ರಕಟಿಸಲಿದ್ದು,ಇದೇ ಸಂಧರ್ಭದಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸುವ ಎಲ್ಲ ಸಾಧ್ಯತೆಗಳಿವೆ

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *