Breaking News

ಸಿದ್ರಾಮಯ್ಯ ಯಾರ,ಕಾಲು ಹಿಡಿದು ಸಿಎಂ ಆಗಿದ್ದಾರೆ ಅನ್ನೋದು ಗೊತ್ತಿದೆ

ಬೆಳಗಾವಿ-ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯನವರು,ಈ ರಾಜ್ಯದ ಸಂಸದರು ಗುಲಾಮರು ಎನ್ನುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಸಿದ್ರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ‌

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಯಾರು ಯಾರ ಗುಲಾಮರು,ಸಿದ್ರಾಮಯ್ಯ ಸಿಎಂ ಆಗುವಾಗ ಯಾರ ಕಾಲು ಹಿಡಿದ್ರು,ಹಲವಾರು ಜನ ಹಿರಿಯ ನಾಯಕರನ್ನು ಬದಿಗೆ ಸರಿಸಿ ಅವರು ಕಾಂಗ್ರೆಸ್ಸಿನ ನಾಯಕರಾಗಿದ್ದು ಹೇಗೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಕಟೀಲು ಹೇಳಿದ್ರು.

ಸಿಡಿ ಪ್ರಕರಣಕ್ಕೆ ಸಮಂಧಿಸಿದಂತೆ ಎಸ್ ಐ ಟಿ ತನಿಖೆ ಮಾಡುತ್ತಿದೆ,ಕಾಂಗ್ರೆಸ್ಸಿಗೆ ಸಿಬಿಐ,ಎಸ್ ಐ ಟಿ ಮೇಲೆ ನಂಬಿಕೆ ಇಲ್ಲ,ಇವರಿಗೆ ಪ್ರಜಾ ಪ್ರಭುತ್ವದ ಮೇಲೆಯೂ ನಂಬಿಕೆ ಇಲ್ಲ ಎಂದು ನಳೀನ್ ಕುಮಾರ್ ಕಟೀಲು ಸಿದ್ರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಮಸ್ಕಿ,ಬಸವ ಕಲ್ಯಾಣ ಮತ್ತು ಬೆಳಗಾವಿಯಲ್ಲಿ ಬಿಜೆಪಿ ಸಮಾವೇಶಗಳನ್ನು ಮಾಡಿದೆ,ಜನರಿಂದ ಭಾರೀ ಬೆಂಬಲ ವ್ಯಕ್ತವಾಗಿದ್ದು,ಈ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ ಎಂದರು.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *