Breaking News

ವಲಸಿಗರನ್ನು ಓಡಿಸುವ ಫೇಸ್ ಬುಕ್ ಪೇಜ್ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ- ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಿ ಎಂಬ ತಲೆಬರಹದ ಫೇಸ್ ಬುಕ್ ಪೇಜ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿಯಾಗಿ ಚಿತ್ರವೊಂದನ್ನು ಪೋಸ್ಟ್ ಮಾಡಿರುವ ಹಿನ್ನಲೆಯಲ್ಲಿ ಈ ಫೇಸ್ ಬುಕ್ ಪೇಜ್ ವಿರುದ್ದ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯ ಖಡೇಬಝಾರ್ ಪೋಲೀಸ್ ಠಾಣೆಯಲ್ಲಿ ವಲಸಿಗರನ್ನು ಓಡಿಸಿ ಎಂಬ ಪೇಜ್ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ ಪ್ರಕರಣ ದಾಖಲಾಗಿದೆ

ಈ ಫೇಸ್ ಬುಕ್ ಪೇಜ್ ವಿರುದ್ದ IPC ಸೆ,505 ,153A,505/2 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಖಡೇಬಝಾರ್ ಸಿಪಿಐ ಧೀರಜ್ ಶಿಂಧೆ ಅವರು ತನಿಖೆ ಆರಂಭಿಸಿದ್ದಾರೆ,ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಲು ಮುಂದಾಗಿದ್ದು ಯಾರು ಎನ್ನುವದನ್ನು ಪತ್ತೆ ಹಚ್ಚಲಿದ್ದಾರೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *