ವಲಸಿಗರನ್ನು ಓಡಿಸುವ ಫೇಸ್ ಬುಕ್ ಪೇಜ್ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ- ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಿ ಎಂಬ ತಲೆಬರಹದ ಫೇಸ್ ಬುಕ್ ಪೇಜ್ ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿಯಾಗಿ ಚಿತ್ರವೊಂದನ್ನು ಪೋಸ್ಟ್ ಮಾಡಿರುವ ಹಿನ್ನಲೆಯಲ್ಲಿ ಈ ಫೇಸ್ ಬುಕ್ ಪೇಜ್ ವಿರುದ್ದ ಬೆಳಗಾವಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿಯ ಖಡೇಬಝಾರ್ ಪೋಲೀಸ್ ಠಾಣೆಯಲ್ಲಿ ವಲಸಿಗರನ್ನು ಓಡಿಸಿ ಎಂಬ ಪೇಜ್ ವಿರುದ್ಧ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ ಪ್ರಕರಣ ದಾಖಲಾಗಿದೆ

ಈ ಫೇಸ್ ಬುಕ್ ಪೇಜ್ ವಿರುದ್ದ IPC ಸೆ,505 ,153A,505/2 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಖಡೇಬಝಾರ್ ಸಿಪಿಐ ಧೀರಜ್ ಶಿಂಧೆ ಅವರು ತನಿಖೆ ಆರಂಭಿಸಿದ್ದಾರೆ,ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಲು ಮುಂದಾಗಿದ್ದು ಯಾರು ಎನ್ನುವದನ್ನು ಪತ್ತೆ ಹಚ್ಚಲಿದ್ದಾರೆ.

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *