ಸಿಎಂ ಯಡಿಯೂರಪ್ಪ ನವರಿಗೆ ಬೆಳಗಾವಿ ಗಡಿ ರಕ್ಷಣೆಗಾಗಿ ಶಕ್ತಿ ನೀಡುವಂತೆ ,ಗಣಪತಿ ಪೂಜೆ…!!!!

ಸಿಎಂ ಯಡಿಯೂರಪ್ಪ ನವರಿಗೆ ಗಡಿ ರಕ್ಷಣೆಗಾಗಿ ಶಕ್ತಿ ನೀಡುವಂತೆ ,ಗಣಪತಿ ಪೂಜೆ…!!!!

ಬೆಳಗಾವಿ-ಗಡಿ ವಿಚಾರದಲ್ಲಿ ರಾಜ್ಯ ಸರ್ಕಾರ ಯಾವುದೇ ಕಾಳಜಿ ವಹಿಸುತ್ತಿಲ್ಲ. ಗಡಿವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೌನ ವಹಿಸಿದ್ದಾರೆ. ದೇವರು ಅವರಿಗೆ ಸದ್ಬುದ್ಧಿ ನೀಡಲಿ ಎಂದು ಪ್ರಾರ್ಥಿಸಿ
ಬೆಳಗಾವಿಯಲ್ಲಿ ಕರವೇ ನಾರಾಯಣಗೌಡ ಬಣದಿಂದ ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು

ಗಡಿವಿಚಾರದಲ್ಲಿರುವ ಎಲ್ಲ ವಿಘ್ನಗಳು ನಿವಾರಣೆಯಾಗಲಿ,ಗಡಿ ಉಸ್ತುವಾರಿ ಸಚಿವರ ನೇಮಕವಾಗಲಿ,ಗಡಿ ಸಂರಕ್ಷಣಾ ಆಯೋಗದ ಕಚೇರಿ,ಕನ್ನಡ ಅಭಿವೃದ್ಧಿ ಪ್ರಾದಿಕಾರದ ,ಗಡಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗಳನ್ನು ತಕ್ಷಣ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುವ ಶಕ್ತಿಯನ್ನು ಶ್ರೀಗಣೇಶ ಯಡಿಯೂರಪ್ಪನವರಿಗೆ ಕೊಡಲಿ ಎಂದು ಕರವೇ ಕಾರ್ಯಕರ್ಯರು ದೀಪಕ ಗುಡಗನಟ್ಟಿ ಸಾರಥ್ಯದಲ್ಲಿ ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ವಿಘ್ನವಿನಾಯಕನ ಗಮನ ಸೆಳೆದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *