Breaking News
Home / Breaking News / ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮುಸುಕಿನ ಗುದ್ದಾಟ….!!!!

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮುಸುಕಿನ ಗುದ್ದಾಟ….!!!!

ಬೆಳಗಾವಿ-ಭೌಗೋಳಿಕವಾಗಿ ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆಯಾಗಿರುವ,ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಜಿಲ್ಲಾದ್ಯಕ್ಷ ಸ್ಥಾನಕ್ಕೆ ಮುಸುಕಿನ ಗುದ್ದಾಟ ಶುರುವಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧ್ಯಕ್ಚರ ಬದಲಾವಣೆಯ ವಿಚಾರ ಚರ್ಚೆಯಲ್ಲಿದೆ ಎಂದು ಹೇಳಿಕೆ ನೀಡಿರುವ ಬೆನ್ನಲ್ಲಿಯೇ ಅದ್ಯಕ್ಷ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿರುವ ಮೂವರು ದಿಗ್ಗಜರಲ್ಲಿ ಅದ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದೆ.

ಯುವ ಕಾಂಗ್ರೆಸ್ ಘಟಕದಲ್ಲಿ ಹಲವಾರು ವರ್ಷಗಳ ಕಾಲ ಸಂಘಟನೆ ಮಾಡಿರುವ ಬಸವರಾಜ ಶೇಗಾವಿ,ಬೈಲಹೊಂಗಲದ ಮಹಾಂತೇಶ್ ಮತ್ತಿಕೊಪ್ಪ,ಹಾಗು ಮಾಜಿ ಸಚಿವ ದಿ.ವ್ಹಿ.ಎಸ್ ಕೌಜಲಗಿ ಅವರ ಸುಪುತ್ರ ರಾಜದೀಪ ಕೌಜಲಗಿ, ಅವರು ಜಿಲ್ಲಾ ಕಾಂಗ್ರೆಸ್ ಅದ್ಯಕ್ಷ ಸ್ಥಾನ ಪಡೆಯಲು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ.

ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ,ಯಾವುದೇ ವಿವಾದಕ್ಕೆ ಆಸ್ಪದ ಕೊಡದೇ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ವಿನಯ ನಾವಲಗಟ್ಟಿ ಅವರನ್ನೇ ಮುಂದಿನ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಮುಂದುವರೆಸುವಂತೆ,ಕಾಂಗ್ರೆಸ್ ಪಕ್ಷದ ಒಂದು ಗುಂಪು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಹಾಲಿ,ಮಾಜಿ ಶಾಸಕರ ಅಭಿಪ್ರಾಯ ಪಡೆದ ಬಳಿಕ ಬೆಳಗಾವಿ ಜಿಲ್ಲಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸಲಿದ್ದಾರೆ.

ಬಸವರಾಜ್ ಶೇಗಾವಿ,ಮಹಾಂತೇಶ್ ಮತ್ತಿಕೊಪ್ಪ,ರಾಜದೀಪ ಕೌಜಲಗಿ ಅವರನ್ನು ಹೊರತುಪಡಿಸಿ ಬೇರೊಬ್ಬ ಕ್ರೀಯಾಶೀಲ ಕಾರ್ಯಕರ್ತನನ್ನು ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಗಳಿದ್ದು,ಈ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಅವರ ನಿರ್ಣಯವೇ ಫೈನಲ್ ಎಂದು ಹೇಳಲಾಗುತ್ತಿದೆ.

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *