ಚಿಹ್ನೆಯ ಮೇಲೆ ಚುನಾವಣೆ ಎದುರಿಸಲು,ಕಾಂಗ್ರೆಸ್ ಗ್ರೀನ್ ಸಿಗ್ನಲ್….

ಪಕ್ಷದ ಚಿಹ್ನೆಯ ಮೇಲೆ ಬೆಳಗಾವಿ ಪಾಲಿಕೆ ಚುನಾವಣೆ ಎದುರಿಸಲು ಕಾಂಗ್ರೆಸ್ ನಿರ್ಧಾರ…

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಕುರಿತು ಸೋಮವಾರ ಹೈಕೋರ್ಟ್ ತೀರ್ಪು ನೀಡಲಿದ್ದು ಚುನಾವಣೆ ನಡೆಯುತ್ತೋ ಇಲ್ಲವೋ ಅನ್ನೋದು ಸೋಮವಾರ ಫೈನಲ್ ಆಗಲಿದೆ.

ಆದರೂ ರಾಜಕೀಯ ಪಕ್ಚಗಳು ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷ ,ಪಕ್ಷದ ಚಿಹ್ನೆಯ ಮೇಲೆಯೇ ಚುನಾವಣೆ ನಡೆಸುವಂತೆ ,ಕೆಪಿಸಿಸಿ ಅದ್ಯಕ್ಷರು ಬೆಳಗಾವಿ ನಗರ ಜಿಲ್ಲಾಧ್ಯಕ್ಷರಿಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ,ಜೊತೆಗೆ ಚುನಾವಣೆಯ ಉಸ್ತುವಾರಿ ನೋಡಿಕೊಳ್ಳಲು,ಮಾಜಿ ಸಚಿವ ಎಂ.ಬಿ ಪಾಟೀಲ ,ಸಂಸದ ಹಣಮಂತಯ್ಯ,ಅವರನ್ನು ಬೆಳಗಾವಿ ಪಾಲಿಕೆ ಉಸ್ತುವಾರಿಗಳನ್ನಾಗಿ ನೇಮಿಸಿದ್ದು ಕಾಂಗ್ರೆಸ್ ಪಾಲಿಕೆ ಚುನಾವಣೆಗೆ ಅಖಾಡಾ ರೆಡಿ ಮಾಡುತ್ತಿದೆ.

ನಾಳೆ ಸಂಜೆ ನಾಲ್ಕು ಗಂಟೆಗೆ ಬೆಳಗಾವಿ ಮಹಾನಗರ ಪಾಲಿಕೆಯ ಪರಿಷತ್ತ್ ಸಭಾಭವನದಲ್ಲಿ ಚುನಾವಣಾ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ಹಿರೇಮಠ ಅವರು ಪತ್ರಿಕಾಗೋಷ್ಢಿ ನಡೆಸಿ ಚುನಾವಣೆಯ ಕುರಿತು ಮಾಹಿತಿ ನೀಡಲಿದ್ದಾರೆ.

ಒಟ್ಟಾರೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆಯುವದು ಖಚಿತವಾಗಿದ್ದು, ರಾಜಕೀಯ ಪಕ್ಷಗಳು ಇಲೆಕ್ಷನ್ ತಯಾರಿ ಮಾಡಿಕೊಳ್ಳುತ್ತಿವೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *