ಬೆಳ್ಳಂ ಬೆಳಿಗ್ಗೆ ಯುವಕನ ಮರ್ಡರ್….

ಬೆಳಗಾವಿ-ಗೋಕಾಕ್‌ನಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ.

ಬೆಳಗಾವಿ ಜಿಲ್ಲೆ ಗೋಕಾಕ್‌ ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು,22 ವರ್ಷದ ಮಂಜು ಶಂಕರ್ ಮುರಕಿಭಾವಿ ಕೊಲೆಯಾದ ಯುವಕನಾಗಿದ್ದು,ತಡರಾತ್ರಿ ಯುವಕನ ಹತ್ಯೆಗೈದು ಪರಾರಿಯಾಗಿರುವ ದುಷ್ಕರ್ಮಿಗಳು,ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.

ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಶಂಕರ್ ಮುರಕಿಭಾವಿ,ಎಂಬಾತನನ್ನು ಮಾರಕಾಸ್ತ್ರ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಯುವಕನ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟ‌ನೆ ನಡೆದಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *