Breaking News

ಪಕ್ಕದ್ಮನೆ ಲವ್ ಪ್ರಕರಣ,ಪುನವರ್ವಸತಿ ಕೇಂದ್ರಕ್ಕೆ ತಳ್ಳಿದ ಇನೆಸ್ಪೆಕ್ಟರ್ ಗೆ ದಂಡ…..!!!

ಗಂಡ ಹೆಂಡತಿ ಜಗಳ ಎಂದು ಠಾಣೆಗೆ ಬಂದಾಗ,ಹೆಂಡತಿಯನ್ನು ಪುನವರ್ಸತಿ ಕೇಂದ್ರದಲ್ಲಿ ಐದು ತಿಂಗಳ ಕಾಲ ದಿಗ್ಭಂಧನ ಮಾಡಿದ ಬೆಳಗಾವಿಯ ಮಾಳ ಮಾರುತಿ ಠಾಣೆಯ ಸಿಪಿಐಗೆ ಹೈಕೋರ್ಟ್ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಬೆಳಗಾವಿ-ಅರ್ಜಿದಾರ ಮಹಿಳೆ ನೆರೆ ಮನೆಯ ವ್ಯಕ್ತಿಯನ್ನು ಪ್ರೀತಿಸುತಿದ್ದು, ಇದೇ ಕಾರಣಕ್ಕೆ ಗಂಡನ ಮನೆ ತೊರೆಯಲು ನಿರ್ಧರಿಸಿದ್ದಾಳೆ ಎಂಬ ವಿಚಾರ ಕೌನ್ಸೆಲಿಂಗ್ ನಡೆಸುವ ವೇಳೆ ಇನ್ಸ್ ಪೆಕ್ಟರ್ ಗೆ ತಿಳಿದಿದೆ. ಈ ಕಾರಣದಿಂದ ಆಕೆಯನ್ನು ನೆರೆಮನೆಯ ವ್ಯಕ್ತಿಯಿಂದ ದೂರವಿರಿಸುವ ಉದ್ದೇಶದಿಂದ  ಒತ್ತಾಯಪೂರ್ವಕವಾಗಿ ಪುನವರ್ಸತಿ ಕೇಂದ್ರದಲ್ಲಿರಿಸಿದ್ದಾರೆ ಎಂದೆನಿಸುತ್ತದೆ.

ಆದರೆ, ವೈವಾಹಿಕ ಸಂಬಂಧದಲ್ಲಿ ಮಧ್ಯ ಪ್ರವೇಶಿಸಿ ನ್ಯಾಯ ಕೊಡಿಸುವ ನೆಪದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸುವ ಅಧಿಕಾರ ಪೊಲೀಸರಿಗಿಲ್ಲ ಎಂದು ಕೋರ್ಟ್ ಹೇಳಿದೆ. ಸಂತ್ರಸ್ತ ಮಹಿಳೆಗೆ 2017ರಲ್ಲಿ ಮದುವೆಯಾಗಿತ್ತು.ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ಈ ಮಧ್ಯೆ ಗಂಡ- ಹೆಂಡತಿ ನಡುವೆ ಮನಸ್ತಾಪ ಮೂಡಿತ್ತು. ಇದರಿಂದ, ಮಹಿಳೆ ತನ್ನ ಮಗಳೊಂದಿಗೆ   2021ರ ಮೇ ತಿಂಗಳಿನಲ್ಲಿ ಗಂಡನ ಮನೆ ತೊರೆದು ಬಂದಿದ್ದಳು.

 ನಂತರ ಆಕೆಯ ಪತಿ ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ಬಾಳಸಾಹೇಬ್ ಪಾಟೀಲ್, ದೂರುದಾರನ ಪತ್ನಿಯನ್ನು ಕರೆಸಿ ವಿಚಾರಣೆ ನಡೆಸಿದ್ದರು. ಆದರೆ, ಪತಿಯೊಂದಿಗೆ ತೆರಳಲು ಮಹಿಳೆ ನಿರಾಕರಿಸಿದ್ದಳು.
ಗಂಡನ ಮನೆಗೆ ಹೋಗಲು ಒಪ್ಪದ ಪತ್ನಿ ಮತ್ತು ಆಕೆಯ ಮೂರು ವರ್ಷದ ಹೆಣ್ಣು ಮಗುವನ್ನು ವೇಶ್ಯಾವಾಟಿಕೆಗಾಗಿ ಮಾನವ ಕಳ್ಳ ಸಾಗಣೆ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ಇನ್ಸ್ ಪೆಕ್ಟರ್ ಕಳುಹಿಸಿದ್ದರು. ನನ್ನ ಇಚ್ಚೆಗೆ ವಿರುದ್ಧವಾಗಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಆರೋಪಿಸಿ ಈ ಮಹಿಳೆ ಇನ್ಸ್ ಪೆಕ್ಟರ್ ಹಾಗೂ ಪುನವರ್ಸತಿ ಕೇಂದ್ರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಳು.

ಮಹಿಳೆ ಪಕ್ಕದ್ಮನೆ ವ್ಯೆಕ್ತಿಯನ್ನು ಪ್ರೀತಿಸಿ ಗಂಡನಿಂದ ದೂರವಾಗಿದ್ದಳು,ಗಂಡನ ದೂರಿನ ಮೇರೆಗೆ ಬೆಳಗಾವಿಯ ಮಾಳ ಮಾರುತಿ ಠಾಣೆಯ ಇನೆಸ್ಪೆಕ್ಟರ್ ಈ ಮಹಿಳೆಯನ್ನು ಪುನರ್ವಸತಿ ಕೇಂದ್ರಕ್ಕೆ ತಳ್ಳಿದ್ದು ಈಗ ಮುಳುವಾಗಿದೆ.

ಈ ಪ್ರಕರಣಕ್ಕೆ ಸಮಂಧಿಸಿದಂತೆ ಮಾನ್ಯ ಹೈಕೋರ್ಟ್ ಇನೆಸ್ಪೆಕ್ಟರ್ ಗೆ ಒಂದು ಲಕ್ಷ, ಹಾಗೂ ಪುನರ್ವಸತಿ ಕೇಂದ್ರದ ನಿರ್ವಾಹಕರಿಗೆ ಒಂದು ಲಕ್ಷ ಒಟ್ಟು ಎರಡು ಲಕ್ಷ  ದಂಡ ವಿಧಿಸಿದೆ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *