Breaking News

ಹುಡಗಿಯನ್ನು ಚುಡಾಯಿಸಿದವನಿಗೆ ಬುದ್ದಿ ಹೇಳಲು ಹೋದ ನಾಲ್ವರಿಗೆ ಚಾಕು ಇರಿತ

ಬೆಳಗಾವಿ-ಬಾಲಕಿಯನ್ನ ಚೂಡಾಯಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಕು ಇರಿತ.ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ನಿನ್ನೆ ಸಂಜೆ ಬಾಲಕಿಯನ್ನ ಚೂಡಾಯಿಸಿದ್ದಕ್ಕೆ ಪ್ರಶ್ನಿಸಲು ಹಿರಿಯ ಸಮೇತ ಬಾಲಕಿ ತಂದೆ ಹುಡುಗನ ಮನೆಗೆ ಹೋಗಿದ್ದರು.ಈ ವೇಳೆ 17ವರ್ಷದ ಬಾಲಕ ಹಾಗೂ ಆತನ ಸ್ನೇಹಿತರಿಂದ ಬುದ್ದಿ ಹೇಳಲು ಹೋದವರ ಮೇಲೆ ಹಲ್ಲೆ ಮಾಡಿದ್ದಾನೆ.*ಜಗಳ ವಿಕೋಪಕ್ಕೆ ತಿರುಗಿ ಬುದ್ದಿ ಹೇಳಲು ಹೋದ ನಾಲ್ವರಿಗೆ ಚಾಕು ಇರಿತ,ಆಗಿದ್ದು ಓರ್ವನ ಮೇಲೆ ಹಲ್ಲೆ ಮಾಡಲಾಗಿದೆ.

ಒಂದೇ ಸಮುದಾಯಕ್ಕೆ ಸೇರಿದ್ದ ಬಾಲಕ, ಬಾಲಕಿ.
ಆರೋಪಿ ಕಡೆಯ ಓರ್ವ ವ್ಯಕ್ತಿಗೂ ಗಾಯಗೊಂಡಿದ್ದಾನೆ.
ರಫೀಕ್ ಕುರಿಕೊಪ್ಪ, ಸಾಹಿದ್ ಸೌದಾಗರ್, ಅತಾಹುಲ್ಲಾ ಹುಬ್ಬಳ್ಳಿ, ಮೆಹಬೂಬ್ ಹುಬ್ಬಳ್ಳಿಗೆ ಚಾಕು ಇರಿತವಾಗಿದೆ.
ಜಗಳ ಬಿಡಿಸಲು ಹೋದ ರವಿ ತಿಮ್ಮನ್ನರ್ ಎಂಬುವವರ ಮೇಲೆ ಹಲ್ಲೆಯಾಗಿದ್ದುಗಾಯಗಳುಗಳಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಿಮ್ಸ್ ಆಸ್ಪತ್ರೆ ಬಳಿ ಓರ್ವ ಎಸಿಪಿ, ಇಬ್ಬರು ಸಿಪಿಐ ಸೇರಿ ಇಪ್ಪತ್ತಕ್ಕೂ ಹೆಚ್ಚು ಜನ ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿತ್ತುಮುಂಜಾಗ್ರತಾ ಕ್ರಮವಾಗಿ ಬಿಮ್ಸ್ ಆಸ್ಪತ್ರೆ ಬಳಿ ಪೊಲೀಸರ ನಿಯೋಜನೆ ಮಾಡಿ,ಈ ಘಟನೆಯ ಸುದ್ದಿ ಕೇಳಿ ಭೀಮ್ಸ್ ಆಸ್ಪತ್ರೆ ಬಳಿ ಸೇರಿದ ಜನರನ್ನು ಪೋಲೀಸರು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Check Also

ಬೆಳಗಾವಿಗೆ ಹುಲಿ ಬಂದಿದ್ದು ನೂರಕ್ಕೆ ನೂರು ಸತ್ಯ….!!

ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ …

Leave a Reply

Your email address will not be published. Required fields are marked *