Breaking News

ನಾಪತ್ತೆಯಾದ ಯುವಕನ ಶವ ತಿಲ್ಲಾರಿ ಘಾಟಿನಲ್ಲಿ ಪತ್ತೆ

ಬೆಳಗಾವಿ- ಅಗಸ್ಟ10 ರಂದು ನಾಪತ್ತೆಯಾದ ಯುವಕನ ಶವ ಇಂದು ತಿಲ್ಲಾರಿ ಘಾಟ ಬಳಿ ಪತ್ತೆಯಾಗಿದ್ದು ತಿಳಕವಾಡಿ ಪೋಲೀಸರು ಸ್ಥಳಕ್ಕೆ ಧಾವಿಸಿದ್ದಾರೆ

ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ನಗರದ ನಿವಾಸಿ 27 ವರ್ಷದ ರಾಹುಲ್ ಶರಣಪ್ಪ ದಿವಟಗಿ ಎಂಬ ಯುವಕ ಅಗಸ್ಟ 10 ರಂದು ನಾಪತ್ತೆಯಾಗಿದ್ದ ಅದೇ ದಿನ ಆತನ ಅಪಹರಣ ನಡೆದಿತ್ತು ಎಂದು ಹೇಳಲಾಗಿದ್ದು ಡಿಳಕವಾಡಿ ಪೋಲೀಸರು ಮಿಸ್ಸಿಂಗ್ ಕಂಪ್ಲೇಂಟ್ ದಾಖಲು ಮಾಡಿಕೊಂಡು ಅಷ್ಡೊಂದು ಸಿರೀಯಸ್ ಆಗಿ ತೆಗೆದುಕೊಂಡಿರಲಿಲ್ಲ ಎಂದು ಹೇಳಲಾಗಿದೆ

ಇಂದು ಬೆಳಿಗ್ಗೆ ಅಪಹರಣಕ್ಕೊಳಗಾಗಿ ನಾಪತ್ತೆಯಾದ ಈ ಯುವಕನ ಶವ ತಿಲ್ಲಾರಿ ಘಾಟಿನಲ್ಲಿ ಸಿಕ್ಕಿದೆ ಎಂಬ ಮಾಹಿತಿ ದೊರಕುತ್ತಿದ್ದಂತೆಯೇ ಟಿಳಕವಾಡಿ ಠಾಣೆಯ ಪೋಲೀಸರ ತಂಡ ತಿಲ್ಲಾರಿ ಘಾಟಿಗೆ ದೌಡಾಯಿಸಿದೆ

ಈ ಪ್ರಕರಣಕ್ಕೆ ಸಮಂಧಿಸಿದಂತೆ ಪೋಲೀಸರು ಓರ್ವನನ್ನು ತಮ್ಮ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು ಮುಖ್ಯ ಆರೋಪಿಯ ಪತ್ತೆಗೆ ಪೋಲೀಸರು ಜಾಲ ಬೀಸಿದ್ದಾರೆ

Check Also

ಬಾಲಕನ ಮೇಲೆ ಹಲ್ಲೆ ಮಾಡಿದ, ಮೂವರ ಬಂಧನ

ಸಣ್ಣಪುಟ್ಟ ಜಗಳದಲ್ಲಿ ಚಿಕ್ಕ,ಚಿಕ್ಕ ಮಕ್ಕಳು ಚಾಕು, ಚೂರಿ, ತಲವಾರ್ ಗಳಿಂದ ವಾರ್, ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ತಲವಾರ್ ಗಳಿಂದ ವಾರ್ …

Leave a Reply

Your email address will not be published. Required fields are marked *