Breaking News

ಕಾಕತಿ ಬಳಿ ಭೀಕರ ಅಪಘಾತ ಇಬ್ಬರ ದುರ್ಮರಣ…

ಬೆಳಗಾವಿ- ಬೆಳಗಾವಿಯ ಕಾಕತಿ ಬಳಿಯ ವಂಟಮೂರಿ ಘಾಟ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ‌.

ಲಾರಿಯೊಂದು ಡಿವೈಡರ್ ಜಂಪ್ ಮಾಡಿ ರಸ್ತೆಯ ಇನ್ನೊಂದು ಬದಿಯಲ್ಲಿದ್ದ ಎರಡು ಲಾರಿಗಳಿಗೆ ಅಪ್ಪಳಿಸಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು ಈ ಅಪಘಾತದಲ್ಲಿ ಒಟ್ಟು ಮೂರು ಲಾರಿಗಳು ಚಿಂದಿಯಾಗಿವೆ.

ಉತ್ತರ ಪ್ರದೇಶದ ನೀರಜ್,ಮಹಾರಾಷ್ಟ್ರ ಬೀಡ ಜಿಲ್ಲೆಯ ರಾಜೇಂದ್ರ ದೋಹಿಪಡೆ ಎಂಬಾತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ವಂಟಮೂರಿ ಘಾಟ್ ಇಳಿಜಾರಿನಿಂದ ಜೋರಾಗಿ ಬಂದ ಲಾರಿ ನಿಯಂತ್ರಣ ತಪ್ಪಿ,ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ನಿಂತಿದ್ದ ಎರಡು ಲಾರಿಗಳಿಗೆ ಅಪ್ಪಳಿಸಿದ ಕಾರಣ ಈ ಭೀಕರ ಅಪಘಾತ ಸಂಭವಿಸಿದ್ದು ರಸ್ತೆಯಲ್ಲಿ ಲಾರಿಗಳ ಬಿಡಿಬಾಗಗಳು ಚಿಲ್ಲಾಪಿಲ್ಲಿಯಾಗಿವೆ.

ತಡರಾತ್ರಿ ಸ್ಥಳಕ್ಕೆ ಧಾವಿಸಿದ ಕಾಕತಿ ಪೋಲೀಸರು ತಕ್ಷಣ ವಾಹನಗಳನ್ನು ತೆರವು ಮಾಡಿ,ರಾಷ್ಟ್ರೀಯ ಹೆದ್ದಾರಿಯ ಸಂಚಾರಕ್ಕೆ ಅನಕೂಲ ಮಾಡಿದ್ದಾರೆ.ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ‌.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *