Breaking News

ಜಮೀನು ವಿವಾದ, ಪರಸ್ಪರ ಹೊಡೆದಾಡ ಇಬ್ಬರೂ ಖಲ್ಲಾಸ್…

ಬೆಳಗಾವಿ- ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು,ಇಬ್ಬರೂ ಗಾಯಗೊಂಡು ಇಬ್ಬರೂ ಮೃತಪಟ್ಟ ಘಟನೆ ಅಥಣಿ ತಾಲ್ಲೂಕಿನಲ್ಲಿ ನಡೆದಿದೆ.

ಹಣಮಂತ ರಾಮಚಂದ್ರ ಖೋತ ( 34) ಮತ್ತು ಖಂಡೂಬಾ ತಾನಾಜಿ ಖೋತ ( 32) ಇವರು ಮೃತಪಟ್ಟಿದ್ದಾರೆ. ಇಬ್ಬರೂ ಅಥಣಿ ತಾಲ್ಲೂಕಿನ ಖೋತವಾಡಿ ಗ್ರಾಮದವರಾಗಿದ್ದಾರೆ.

ಜಮೀನಿಗೆ ಸಂಭಂಧಿಸಿದಂತೆ ಇಬ್ಬರ ನಡುವೆ ಹಲವಾರು ದಿನಗಳಿಂದ ವಿವಾದ ನಡೆದಿತ್ತು, ಗ್ರಾಮದ ಹಿರಿಯರೂ ರಾಜಿ ಪಂಚಾಯತಿ ಮಾಡಿಸಿ ಇಬ್ಬರ ನಡುವೆ ರಾಜಿ ಸಂಧಾನ ಮಾಡಿಸಿದ್ರು ಆದ್ರೂ ಸಹ ನಿನ್ನೆ ರಾತ್ರಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಇಬ್ಬರೂ ಪರಸ್ಪರ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಇಬ್ಬರೂ ಗಾಯಗೊಂಡಿದ್ದರು. ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು ಆದ್ರೆ ಇಬ್ಬರೂ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಮೃತಪಟ್ಟಿದ್ದಾರೆ. ಈ ಘಟನೆ ಅಥಣಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Check Also

ಮಗಳು ದೂರು ಕೊಟ್ಟ ಮೇಲೆ, ವಾರದ ನಂತರ ಸಮಾಧಿಯಿಂದ ಶವ ಹೊರಕ್ಕೆ……!!

ಬೆಳಗಾವಿ-ವಾರದ ಹಿಂದೆ ಮಹಾಂತೇಶ್ ನಗರದ ನಿವಾಸಿ ಸಂತೋಷ ಪದ್ಮಣ್ಣವರ ಅವರ ಸಾವು ಸಹಜ ಸಾವು ಎಂದು ಎಲ್ಲರು ತಿಳಿದುಕೊಂಡಿದ್ದರು, ಆದ್ರೆ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.