Home / Breaking News / ಯುದ್ಧ ಪೀಡಿತ ಉಕ್ರೇನ್ ದಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ 17 ಜನ ಸಿಲುಕಿದ್ದಾರೆ.

ಯುದ್ಧ ಪೀಡಿತ ಉಕ್ರೇನ್ ದಲ್ಲಿ ಬೆಳಗಾವಿ ಜಿಲ್ಲೆಯ ಇನ್ನೂ 17 ಜನ ಸಿಲುಕಿದ್ದಾರೆ.

ಬೆಳಗಾವಿ-ಯುದ್ದಪೀಡಿತ ಉಕ್ರೇನ್ ದೇಶಕ್ಕೆ ಮೆಡಿಕಲ್ ಶಿಕ್ಷಣ ಪಡೆಯಲು ಹೋಗಿದ್ದ ಬೆಳಗಾವಿ ಜಿಲ್ಲೆಯ ಇನ್ನೂ 17 ಜನ ಸಿಲುಕಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಿಗ್ಗೆ ಅವರನ್ನು ಭೇಟಿಯಾದ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಉಕ್ರೇನ್‌ನಲ್ಲಿ ಬೆಳಗಾವಿಯ 19 ವಿದ್ಯಾರ್ಥಿಗಳು ಸಿಲುಕಿದ್ದು, ಇಬ್ಬರು ವಾಪಸ್ ಆಗಿದ್ದಾರೆ.ರಾಜ್ಯ ನೋಡಲ್ ಅಧಿಕಾರಿ ಡಾ.ಮನೋಜ್ ರಾಜನ್ ನಮಗೆ ಪಟ್ಟಿ ನೀಡಿದ್ದಾರೆ. ಆ ಪ್ರಕಾರ ಉಕ್ರೇನ್‌ನಲ್ಲಿ ಬೆಳಗಾವಿಯ 19 ವಿದ್ಯಾರ್ಥಿಗಳು ಇದ್ದರು. ಈಗಾಗಲೇ ಇಬ್ಬರು ವಿದ್ಯಾರ್ಥಿಗಳು ವಾಪಸ್ ಬಂದಿದ್ದಾರೆ.17 ಜನರ ಪಟ್ಟಿಯನ್ನು ಆಯಾ ತಾಲೂಕಿನ ತಹಶಿಲ್ದಾರ್‌ಗಳಿಗೆ ಕೊಟ್ಟಿದ್ದೇವೆ ಎಂದು ಬೆಳಗಾವಿ ಡಿಸಿ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಉಕ್ರೇನ್ ನಲ್ಲಿ ಸಿಲುಕಿರುವ 17 ಜನ ವಿದ್ಯಾರ್ಥಿಗಳ, ಮನೆಗೆ ಹೋಗಿ ಧೈರ್ಯ, ಆತ್ಮ ವಿಶ್ವಾಸ ತುಂಬುವಂತೆ ಹೇಳಿದ್ದು,ಈಗಾಗಲೇ ತಹಶಿಲ್ದಾರ್ 12 ವಿದ್ಯಾರ್ಥಿಗಳ ಪಾಲಕರ ಭೇಟಿಯಾಗಿದ್ದಾರೆ.
ನಾನೂ ಸಹ ಇಂದು ಕೆಲವು ವಿದ್ಯಾರ್ಥಿಗಳ ಪಾಲಕರ ಭೇಟಿಯಾಗುವೆ ಎಂದು ಬೆಳಗಾವಿ ಜಿಕ್ಲಾಧಿಕಾರಿ ಹಿರೇಮಠ ತಿಳಿಸಿದರು.

ರಾಯಬಾಗ ಮೂಲದ ವಿದ್ಯಾರ್ಥಿ ಪಾಲಕರ ಜೊತೆ ಮಾತನಾಡಿದ್ದೇನೆ.ಉಕ್ರೇನ್‌ನ ಪೂರ್ವ ಭಾಗದಲ್ಲೇ ಹೆಚ್ಚಿನ ಜನ ಇದ್ದಾರೆ.ಕೇಂದ್ರ ಸಚಿವರ ತಂಡ ಸಹ ಉಕ್ರೇನ್‌ಗೆ ಹೋಗಿದೆ.
ನಾವೆಲ್ಲರೂ ಸೇರಿ ಪೋಷಕರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಬೇಕು,ಪಾಲಕರು ನೀಡಿದ ಮಾಹಿತಿ ರಾಜ್ಯ ನೋಡಲ್ ಅಧಿಕಾರಿಗಳಿಗೆ ನೀಡಿದ್ದೇವೆ.ಮುಂಬೈಗೆ ಬೆಳಗಾವಿಯ ಇಬ್ಬರು ಅಧಿಕಾರಿಗಳು ಹೋಗಿ ಮೂರು ದಿನಗಳಾಯ್ತು,ಸ್ಮಾರ್ಟ್ ಸಿಟಿ ಎಂ.ಡಿ. ಪ್ರವೀಣ್ ಬಾಗೇವಾಡಿ, ಎಸಿ ರವಿ ಕರಲಿಂಗಣ್ಣವರ್ ಮುಂಬೈ ಏರ್‌ಪೋರ್ಟ್‌‌ನಲ್ಲಿದ್ದಾರೆ ಎಲ್ಲ ಬೆಳವಣಿಗೆಗಳ ಕುರಿತು ಅವರು ಮಾಹಿತಿ ನೀಡುತ್ತಿದ್ದಾರೆ ಎಂದು ಡಿಸಿ ಹೇಳಿದ್ರು‌.

ಮುಂಬಯಿಯಲ್ಲಿರುವ ನೋಡೆಲ್ ಅಧಿಕಾರಿಗಳು,ರಾಜ್ಯದ ವಿದ್ಯಾರ್ಥಿಗಳ ಮಾಹಿತಿ ಪಡೆದು ಟಿಕೆಟ್ ಬುಕ್ ಮಾಡಿ ಸ್ವಂತ ಊರಿಗೆ ಕಳಿಸುವ ವ್ಯವಸ್ಥೆ ಮಾಡ್ತಿದ್ದಾರೆ ಎಂದು ಡಿಸಿ ಹೇಳಿದ್ದಾರೆ.

Check Also

28 ರಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ..

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಚುನಾವಣೆಯ ರಂಗೇರಿದೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಚುನಾವಣಾ ಪ್ರಚಾರದ ಅವಧಿ ಮುಕ್ತಾಯವಾಗುವ ಹಂತದಲ್ಲಿ ವಿವಿಧ ರಾಜಕೀಯ …

Leave a Reply

Your email address will not be published. Required fields are marked *