ಕೇಸರಿ ಟೋಪಿ ಹಾಕಿ,ಕೇಸರಿ ತಿಲಕವಿಟ್ಟು,ವಿಘ್ನೇಶ್ವರನ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲೀಂ ಅಧಿಕಾರಿ ಯಾರು ಗೊತ್ತಾ..??

ಹುಕ್ಕೇರಿ-ಕೇಸರಿ ಶಾಲು, ಕೇಸರಿ ಟೋಪಿ, ಹಣೆಗೆ ತಿಲಕ ಇಟ್ಟು ಮುಸ್ಲಿಂ ಪೋಲೀಸ್ ಅಧಿಕಾರಿಯೊಬ್ಬರುಬಾವಕ್ಯತೆಯ ಸಂದೇಶ ಸಾರಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಈದ್ಗಾ ಮೈದಾನ ಸೇರಿದಂತೆ ಜಾತಿ ಧರ್ಮದ ದಂಗಲ್ ಜೋರಾಗಿ ಎದ್ದಿರುವ ಈ ಸಮಯದಲ್ಲಿ ಭಾವೈಕ್ಯತೆಯ ಸಂದೇಶ ಸಾರುವ ಅಪರೂಪದ ಘಟನೆಗಳು ಆಗಾಗ ನಡೆಯುತ್ತವೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮಹಮ್ಮದ್ ರಫೀಕ್ ತಹಶೀಲ್ದಾರ್ ಮುಸ್ಲಿಂ ಧರ್ಮದವರಾಗಿದ್ದರೂ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.‌ಧರ್ಮದ ಸಂಕೋಲೆಯನ್ನು ಬಿಟ್ಟು ಹಣೆಗೆ ತಿಲಕ ಇಟ್ಟು, ತಲೆಗೆ ಕೇಸರಿ ಟೋಪಿ ಹಾಕಿ ಕೇಸರಿ ಶಾಲು ಹಾಕಿ ಠಾಣೆಯ ಸಿಬ್ಬಂಧಿಗಳೊಂದಿಗೆ ಗಣೇಶನಿಗೆ ಮಂಗಳರಾತಿ ಹಾಡು ಹೇಳಿ ಸಾಮರಸ್ಯರ ಸಂದೇಶ ಸಾರಿದ್ದಾರೆ.ಇದೂವರೆಗೂ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡುವ ವಾಡಿಕೆ ಇರಲಿಲ್ಲ ಆದರೆ ಮುಸ್ಲಿಂ ಧರ್ಮದ ಇನ್ಸಪೆಕ್ಟರ್ ಮಹಮ್ಮದ್ ರಫೀಕ್ ಅವರು ಹೊಸದಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ವಿಶೇಷವಾಗಿದೆ. ಇನಸ್ಪೆಕ್ಟರ್ ಅವರ ಈ ಕೆಲಸಕ್ಕೆ ಹುಕ್ಕೇರಿಯ ಸಾರ್ವಜನಿಕರು ಹಾಗೂ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *