Breaking News

ಬೆಳಗಾವಿಯಲ್ಲಿ ಜಿಲ್ಲಾ ಮಂತ್ರಿಗಳ ವಿರುದ್ಧ ರೈತರ ಪ್ರತಿಭಟನೆ

ಜಿಲ್ಲಾ ಮಂತ್ರಿಗಳ ವಿರುದ್ಧ ರೈತರ ಪ್ರತಿಭಟನೆ

ಬೆಳಗಾವಿ- ಗೋಕಾಕಿನ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ರೈತರು ಬೆಳಗಾವಿ ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಅರಬೆತ್ತಲೆ ಉರುಳು ಸೇವೆ ಮಾಡಿದ್ರು

ಸಚಿವ ರಮೇಶ ಜಾರಕಿಹೊಳಿಗೆ ಧಿಕ್ಕಾರ ಹಾಕಿದ ರೈತರಿಂದ ಅರೆಬೆತ್ತಲೆ ಹೋರಾಟ ನಡೆಯುತು ನಿನ್ನೆ ಮದ್ಯಾಹ್ನದಿಂದ ಬೆಳಗಾವಿಯಲ್ಲಿ ಡಿಸಿ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆ ಇಂದು ಬೆಳಿಗ್ಗೆ ಮುಂದುವರೆದಿದೆ
ಸಚಿವ ಜಾರಕಿಹೊಳಿ ಒಡೆತನದ ಕಾರ್ಖಾನೆಯಿಂದ ಬಾಕಿ ಬಿಲ್ ಪಾವತಿಸಲು ರೈತರು ಆಗ್ರಹಿಸಿದ್ದಾರೆ

ಬೆಳಗಾವಿಗೆ ಸಿಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೈತರು ಹೋರಾಟ ನಡೆಸುತ್ತಿದ್ದು ಬಾಕಿ ಬಿಲ್ ಪಾವತಿಸುವವರೆಗೂ ನಿರಂತರ ಹೋರಾಟ ನಡೆಸಲು ರೈತರ ನಿರ್ಧಾರ ಮಾಡಿದ್ದಾರೆ

ಮೈಕೊರೆಯುವ ಚಳಲಿಯಲ್ಲೂ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡುತ್ತ ರೈತರು ಹೋರಾಟ ಮುಂದುವರೆಸಿದ್ದಾರೆ

ಸಚಿವ ಜಾರಕಿಹೊಳಿಗೆ ಧಿಕ್ಕಾರ ಕೂಗಿ ಬೊಬ್ಬೆಹಾಕಿದ ರೈತರು
ರೈತರ ಹೋರಾಟಕ್ಕೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯೆಕ್ತಪಡಿಸಿದರು

ರೈತರ ಹೋರಾಟದಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರ ಅಭಿಮಾನಿ ಆಯಿಷಾ ಸನದಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಢೋಲು ಬಾರಿಸಿ ಎಲ್ಲರ ಗಮನ ಸೆಳೆದಿದ್ದು ರೈತರ ಹೋರಾಟದ ವಿಶೇಷ

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *