Breaking News
Home / Breaking News / ಬೆಳಗಾವಿಯಲ್ಲಿ ಜಿಲ್ಲಾ ಮಂತ್ರಿಗಳ ವಿರುದ್ಧ ರೈತರ ಪ್ರತಿಭಟನೆ

ಬೆಳಗಾವಿಯಲ್ಲಿ ಜಿಲ್ಲಾ ಮಂತ್ರಿಗಳ ವಿರುದ್ಧ ರೈತರ ಪ್ರತಿಭಟನೆ

ಜಿಲ್ಲಾ ಮಂತ್ರಿಗಳ ವಿರುದ್ಧ ರೈತರ ಪ್ರತಿಭಟನೆ

ಬೆಳಗಾವಿ- ಗೋಕಾಕಿನ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ರೈತರು ಬೆಳಗಾವಿ ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಅರಬೆತ್ತಲೆ ಉರುಳು ಸೇವೆ ಮಾಡಿದ್ರು

ಸಚಿವ ರಮೇಶ ಜಾರಕಿಹೊಳಿಗೆ ಧಿಕ್ಕಾರ ಹಾಕಿದ ರೈತರಿಂದ ಅರೆಬೆತ್ತಲೆ ಹೋರಾಟ ನಡೆಯುತು ನಿನ್ನೆ ಮದ್ಯಾಹ್ನದಿಂದ ಬೆಳಗಾವಿಯಲ್ಲಿ ಡಿಸಿ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆ ಇಂದು ಬೆಳಿಗ್ಗೆ ಮುಂದುವರೆದಿದೆ
ಸಚಿವ ಜಾರಕಿಹೊಳಿ ಒಡೆತನದ ಕಾರ್ಖಾನೆಯಿಂದ ಬಾಕಿ ಬಿಲ್ ಪಾವತಿಸಲು ರೈತರು ಆಗ್ರಹಿಸಿದ್ದಾರೆ

ಬೆಳಗಾವಿಗೆ ಸಿಎಂ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರೈತರು ಹೋರಾಟ ನಡೆಸುತ್ತಿದ್ದು ಬಾಕಿ ಬಿಲ್ ಪಾವತಿಸುವವರೆಗೂ ನಿರಂತರ ಹೋರಾಟ ನಡೆಸಲು ರೈತರ ನಿರ್ಧಾರ ಮಾಡಿದ್ದಾರೆ

ಮೈಕೊರೆಯುವ ಚಳಲಿಯಲ್ಲೂ ಅರೆಬೆತ್ತಲೆಯಾಗಿ ಉರುಳು ಸೇವೆ ಮಾಡುತ್ತ ರೈತರು ಹೋರಾಟ ಮುಂದುವರೆಸಿದ್ದಾರೆ

ಸಚಿವ ಜಾರಕಿಹೊಳಿಗೆ ಧಿಕ್ಕಾರ ಕೂಗಿ ಬೊಬ್ಬೆಹಾಕಿದ ರೈತರು
ರೈತರ ಹೋರಾಟಕ್ಕೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯೆಕ್ತಪಡಿಸಿದರು

ರೈತರ ಹೋರಾಟದಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರ ಅಭಿಮಾನಿ ಆಯಿಷಾ ಸನದಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಢೋಲು ಬಾರಿಸಿ ಎಲ್ಲರ ಗಮನ ಸೆಳೆದಿದ್ದು ರೈತರ ಹೋರಾಟದ ವಿಶೇಷ

Check Also

ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

ಕುಮಟಾ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಆದಿಚುಂಚನಗಿರಿ ಮಹಾಸಂಸ್ಥಾನದ ಮಿರ್ಜಾನ್ ಶಾಖಾ ಮಠದ ನಿಶ್ಚಲಾನಂದನಾಥ …

Leave a Reply

Your email address will not be published. Required fields are marked *