Breaking News
Home / Breaking News / ಹೊಡೀ ಶಿಕ್ಕಾ ಆಮ್ಯಾಲ ಕೇಳ ಲೆಕ್ಕಾ…ನೋಡಬ್ಯಾಡ ರೊಕ್ಕಾ…!!!

ಹೊಡೀ ಶಿಕ್ಕಾ ಆಮ್ಯಾಲ ಕೇಳ ಲೆಕ್ಕಾ…ನೋಡಬ್ಯಾಡ ರೊಕ್ಕಾ…!!!

ಬೆಳಗಾವಿ ಜಿಲ್ಲೆಯಲ್ಲಿ ನಾಳೆ ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ.ತಪ್ಪದೇ ಎಲ್ಲರೂ ಮತದಾನ ಮಾಡುವ ಮೂಲಕ ಎಲ್ಲ ಮತದಾರರು ತಮ್ಮ ಹಕ್ಕು ಚಲಾಯಿಸಿ,ಸಾಮಾಜಿಕ ಕಳಕಳಿ ಹೊಂದಿರುವ ಪ್ರಾಮಾಣಿಕ ಅಭ್ಯರ್ಥಿಯನ್ನು ಗೆಲ್ಲಿಸಿ.ಚುನಾವಣೆಯಲ್ಲಿ ಹಣ,ಹೆಂಡದ ಆಮೀಷಕ್ಕೆ ಒಳಗಾಗದೇ ಪ್ರಾಣಿಕರನ್ನು ಆಯ್ಕೆ ಮಾಡಿ…

ಅಕ್ಕಾ..ಕಾಕಾ..ಯಪ್ಪಾ ತಮ್ಮಾ..ಹೊಡೀ ಶಿಕ್ಕಾ,ನೋಡಬ್ಯಾಡ ರೊಕ್ಕಾ…!!!!

ಎರಡನೇ ಹಂತದ ಚುನಾವಣೆ: ಸವದತ್ತಿ, ರಾಮದುರ್ಗಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ

ಬೆಳಗಾವಿ, – :ಎರಡನೇ ಹಂತದಲ್ಲಿ‌ ಗ್ರಾಮ‌ ಪಂಚಾಯತಿ ಚುನಾವಣೆ ನಡೆಯಲಿರುವ ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಎರಡೂ ತಾಲ್ಲೂಕುಗಳಿಗೆ ಸೋಮವಾರ (ಡಿ.21) ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಚುನಾವಣೆಗೆ ನಿಯೋಜಿತ ಅಧಿಕಾರಿಗಳ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಲಹೆ-ಸೂಚನೆಗಳನ್ನು ನೀಡಿದರು.ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ಗ್ರಾಮ ಪಂಚಾಯತಿ ಚುನಾವಣೆ ಸಂದರ್ಭದಲ್ಲಿ ಸ್ಥಳೀಯ ವಿಷಯಗಳಿಗೆ ಸಂಬಂಧಿಸಿದಂತೆ ಜಿದ್ದಾಜಿದ್ದಿ ಇರುವುದರಿಂದ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ನ್ಯಾಯಸಮ್ಮತ ಮತ್ತು ಪಾರ್ದರ್ಶಕ ಚುನಾವಣೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕುಗಳಲ್ಲಿರುವ ಮತಗಟ್ಟೆಗಳು ಮತ್ತು ಮತ ಎಣಿಕೆ‌ ಕೇಂದ್ರದ ಸಿದ್ಧತೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಡಿ.22 ರಂದು ಮೊದಲ ಹಂತದ ಮತದಾನ:

ಗ್ರಾಮ ಪಂಚಾಯತಿ ಚುನಾವಣೆಗೆ ಮೊದಲ ಹಂತದಲ್ಲಿ ಡಿ‌.22 ರಂದು ಏಳು ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದ್ದು, ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಮೊದಲ‌ ಹಂತದಲ್ಲಿ ಬೆಳಗಾವಿ, ಖಾನಾಪುರ, ಹುಕ್ಕೇರಿ, ಬೈಲಹೊಂಗಲ, ಕಿತ್ತೂರು, ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಲ್ಲಿ ಮತದಾನ ನಡೆಯಲಿದೆ.

ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಎರಡನೇ ಹಂತದಲ್ಲಿ ಡಿ.27 ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗಳು ಮತ್ತು ನಿಯಮಾವಳಿ ಪಾಲನೆಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗಿದ್ದು, ಆದಾಗ್ಯೂ ಸಂದೇಹಗಳು ಬಂದರೆ ಕೂಡಲೇ ಸಂಬಂಧಿಸಿದ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಮಾರ್ಗದರ್ಶನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು.

ಸವದತ್ತಿ ‌ಮತ್ತು‌ ರಾಮದುರ್ಗ ತಾಲ್ಲೂಕುಗಳ ತಹಶೀಲ್ದಾರರು ಈ ಸಂದರ್ಭದಲ್ಲಿ ಹಾಜರಿದ್ದರು.
******

Check Also

ಗೋ ಬ್ಯಾಕ್ ಸಂಧಾನಕ್ಕಾಗಿ ,ದಿಢೀರ್ ಬೆಳಗಾವಿಗೆ ಯಡಿಯೂರಪ್ಪ…!!

ಬೆಳಗಾವಿ- ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿ ಕ್ಷೇತ್ರದಿಂದ ಸ್ಪರ್ದಿಸುವ ವಿಚಾರದಲ್ಲಿ ಬಿಜೆಪಿಯಿಂದಲೇ ಗೋ ಬ್ಯಾಕ್ ಆಂದೋಲನ ಶುರುವಾದ …

Leave a Reply

Your email address will not be published. Required fields are marked *