ಪ್ಲಾಸ್ಟಿಕ್ ಧ್ವಜ ಬಳಕೆ ಸಂಪೂರ್ಣವಾಗಿ ನಿಷೇಧಿಸಿ

ಬೆಳಗಾವಿ
ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ದಿನಾಚಾರಣೆಯಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನವಾಗುವುದನ್ನು ತಡೆಗಟ್ಟಬೇಕೆಂದು ಆಗ್ರಹಿಸಿ‌ ಸೋಮವಾರ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸ್ವಾತಂತ್ರ್ಯ ದಿನಾಚಾರಣೆಯಲ್ಲಿ ಸ್ವಾಭಿಮಾನದಿಂದ ದೇಶಾಭಿಮಾನದ ಹಾಡುಗಳನ್ನು ಹಾಡುತ್ತೇವೆ. ಆದರೆ ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಅದು ಕಸದ ತೊಟ್ಟಿ, ಜನರ ಕಾಲ್ತುಳಿತಕ್ಕೆ ಸಿಲುಕಿ ಅವಮಾನ ಮಾಡುತ್ತಿರುವುದು ಈ‌ ಹಿಂದೆ ಕಂಡು ಬಂದಿದೆ. ನಮ್ಮ ರಾಷ್ಟ್ರ ಧ್ವಜದ ಪ್ರತಿಷ್ಠೆಯನ್ನು ಎತ್ತರಕ್ಕೆ ಏರಿಸಲು ಮಹಾಪುರುಷರು ತಮ್ಮ ಪ್ರಾಣವನ್ನೆ ಬಲಿದಾನವಾಗಿ ಅರ್ಪಿಸಿದ ಹುತಾತ್ಮರಿಗೆ ಅವಹೇಳನ ಮಾಡುವಂತಿದೆ. ಅದಕ್ಕೆ ಈ ಸಲದ ಸ್ವಾತಂತ್ರೋತ್ಸವದಲ್ಲಿ ಇಂಥ ಅವಮಾನಕ್ಕೆ ಆಸ್ಪದ ನೀಡಬಾರದೆಂದು ಪ್ರತಿಭಟನಾಕಾರರು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಹಿಂದೂ ಜನಜಾಗೃತಿ ಕಾರ್ಯಕರ್ತರು ಉಪಸ್ಥಿತರಿದ್ದರು

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *