Breaking News
Home / Breaking News / ಸಾರಾಯಿ ಸಿಗಲಿಲ್ಲ ಎಂದು ಇಂದ್ರನ ಪಾದ ಸೇರಿದ ಬೆಳಗಾವಿಯ ದೇವೇಂದ್ರ..

ಸಾರಾಯಿ ಸಿಗಲಿಲ್ಲ ಎಂದು ಇಂದ್ರನ ಪಾದ ಸೇರಿದ ಬೆಳಗಾವಿಯ ದೇವೇಂದ್ರ..

 

ಬೆಳಗಾವಿ- ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಇಡೀ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಸರಾಯಿ ಸಾರಾಯಿ ಸಿಗಲಿಲ್ಲ ಎಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳಗಾವಿಯ ಅನಗೋಳದ ಬೆಂಡಿಗೇರಿ ಚಾಳದಲ್ಲಿ  ಘಟನೆ.ನಡೆದಿದೆ.

ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಹಡಪದ(42) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಲೂನ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ದೇವೇಂದ್ರಪ್ಪ ಹಡಪದ.
ಮೂಲತಃ ಬೆಳಗಾವಿ ಜಿಲ್ಲೆ ಸವದತ್ತಿಯ ನಿವಾಸಿಯಾಗಿರುವ ದೇವೇಂದ್ರಪ್ಪ.
ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ. ಮದ್ಯಕ್ಕೆ ದಾಸನಾಗಿದ್ದ ದೇವೆಂದ್ರ ಎರಡು ದಿನಗಳಿಂದ ಮದ್ಯ ಸಿಗದಿದ್ದಕ್ಕೆ ಬೇಸರಗೊಂಡಿದ್ದನು. ಅನೇಕ ಕಡೆಗಳಲ್ಲಿ ಮದ್ಯಕ್ಕೆ ಅಲೆದ್ರು ಯಾವುದೇ ಪ್ರಯೋಜನ ಆಗಿರಲಿಲ್ಲ. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಂದು ದೇವೇಂದ್ರನ ಕುಟುಂಬ ಮೂಲಗಳು ತಿಳಿಸಿವೆ.

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *