Breaking News
Home / Breaking News / 23 ರಂದು ಲಖನ್ ಜಾರಕಿಹೊಳಿ ಅವರಿಂದ ನಾಮಪತ್ರ……

23 ರಂದು ಲಖನ್ ಜಾರಕಿಹೊಳಿ ಅವರಿಂದ ನಾಮಪತ್ರ……

ಬೆಳಗಾವಿ- ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವದು ಖಚಿತವಾಗಿದ್ದು 23 ರಂದು ಇವರು ತಮ್ಮ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಾರಕಿಹೊಳಿ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.

23 ರಂದು ಬೆಳಿಗ್ಗೆ ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಲಖನ್ ಜಾರಕಿಹೊಳಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಸೇರಲಿದ್ದು ಅವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಹಾಂತೇಶ್ ಕವಟಗಿಮಠ ಅವರು ಸ್ಪರ್ದೆ ಮಾಡುವದು ಖಚಿತವಾಗಿದ್ದು,ಬಿಜೆಪಿ ನಾಯಕರು ಲಖನ್ ಜಾರಕಿಹೊಳಿ ಅವರನ್ನು ಬಿಜೆಪಿಯ ಎರಡನೇಯ ಅಭ್ಯರ್ಥಿಯಾಗುವಂತೆ ಆಫರ್ ಕೊಟ್ಟಿದ್ರು ಆದ್ರೆ ಲಖನ್ ಜಾರಕಿಹೊಳಿ ಇದನ್ನು ನಿರಾಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ದೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವದು ಬಹುತೇಕ ಖಚಿತವಾಗಿದ್ದು ಕೆಪಿಸಿಸಿಯಿಂದ ಅಧಿಕೃತ ಘೋಷಣೆ ಆಗುವದಷ್ಟೇ ಬಾಕಿ ಉಳಿದಿದ್ದು ಚನ್ನರಾಜ್ ಹಟ್ಟಿಹೊಳಿ ಅವರು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಆಯ್ಕೆಯ ಕುರಿತು ಮಹತ್ವದ ಸಭೆ ನಡೆಯಲಿದ್ದು ನಿನ್ನೆಯಷ್ಟೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಚನ್ನರಾಜ ಹಟ್ಟಿಹೊಳಿ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಎಂದು ವ್ಯಾಟ್ಸಪ್ ಸ್ಟೇಟಸ್ ಇಟ್ಟಿದ್ದನ್ನು ನಾವಿಲ್ಲಿ ಸ್ಮರಿಸಬಹುದು.

ಒಟ್ಟಾರೆ ಈಬಾರಿಯ ವಿಧಾನ ಪರಿಷತ್ ಚುನಾವಣೆಯ ತಕ್ಕಡಿಯಲ್ಲಿ, ಪಾರ್ಟಿಗಿಂತಲೂ ಯಾರ “ಪ್ಯಾಕೇಟ್” ಸ್ಟ್ರಾಂಗ್ ಇರುತ್ತದೆಯೋ ಅವರ ಗೆಲುವಿನ ತೂಕ ಹೆಚ್ಚಾಗಲಿದೆ.ಕಣದಲ್ಲಿ ಲಖನ್ ಜಾರಕಿಹೊಳಿ,ಮತ್ತು ಚನ್ನರಾಜ್ ಹಟ್ಟಿಹೊಳಿ ಅವರು ಕಣದಲ್ಲಿ ಉಳಿಯುವದು ನಕ್ಕೀ ಆದಲ್ಲಿ ಈ ಚುನಾವಣೆ ರಂಗೇರುವದು ಖಚಿತ.

ಸಿಎಂ ಬೊಮ್ಮಾಯಿ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಅವರನ್ನು ಗೆಲ್ಲಿಸುವ ಜವಾಬ್ದಾರಿಯನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ವಹಿಸಿದ್ದಾರೆ,ಎಂದು ತಿಳಿದು ಬಂದಿದ್ದು ಈ ಬಾರಿ ಮಹಾಂತೇಶ್ ಕವಟಗಿಮಠ ಅವರು ನಿರಾಳರಾಗಿದ್ದಾರೆ.

Check Also

ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ಬದಲಾದ್ರೆ ಬೆಳಗಾವಿಗೂ ಎಫೆಕ್ಟ್…?

ಬೆಳಗಾವಿ -ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ ಆಗಬೇಕು ಎನ್ನುವ ಬೇಡಿಕೆ ಕಾಂಗ್ರೆಸ್ ನಲ್ಲಿಯೇ ಹೆಚ್ಚಾಗಿದೆ.ಜೊತೆಗೆ ಅಭ್ಯರ್ಥಿ ಬದಲಿಸಿ …

Leave a Reply

Your email address will not be published. Required fields are marked *