ಬೆಳಗಾವಿಯ ಬೀಗರು ಬರುತ್ತಿದ್ದಾರೆ ದಾರಿ ಬಿಡಿ..!!

ಶೆಟ್ಟರ್ ಚಿತ್ತ ಬೆಳಗಾವಿಯತ್ತ : ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಇಂದು ಮಾಜಿ ಸಿಎಂ !

ಬೆಳಗಾವಿ :
ಇಷ್ಟು ವರ್ಷಗಳ ಕಾಲ ಇವರು ಬಿಜೆಪಿ ನಾಯಕರಾಗಿ ಬೆಳಗಾವಿಗೆ ಆಗಮಿಸುತ್ತಿದ್ದರು. ಆದರೆ, ಇದೀಗ ಕಾಂಗ್ರೆಸ್ ನಾಯಕರಾಗಿ ಆಗಮಿಸುತ್ತಿರುವುದು ಚರ್ಚಿತ ವಿಷಯ.

ಬಿಜೆಪಿ ಟಿಕೆಟ್ ವಂಚಿತರಾಗಿ ಕೊನೆಗೆ ಕಾಂಗ್ರೆಸ್ ಸೇರ್ಪಡೆಗೊಂಡು ಚುನಾವಣೆ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಇದೇ ಮೊದಲ ಬಾರಿಗೆ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದಾರೆ.

ಅದರಲ್ಲೂ ಅವರು ಲಿಂಗಾಯತ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಹಾಂತೇಶ ನಗರ ಮಹಾಂತ ಭವನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಇಂದು ಸಂಜೆ 5:00 ಗಂಟೆಗೆ ಜಗದೀಶ ಶೆಟ್ಟರ್ ಕಾರ್ಯಕ್ರಮ ಆಯೋಜಿತಗೊಂಡಿದೆ.

ಬೆಳಗಾವಿ ಉತ್ತರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಶೇಠ ಅವರ ಪರವಾಗಿ ಜಗದೀಶ ಶೆಟ್ಟರ್ ಮತಯಾಚನೆ ಮಾಡಲಿದ್ದಾರೆ. ಶೆಟ್ಟರ್ ಅವರು ಲಿಂಗಾಯತ ಮತದಾರರನ್ನು ಯಾವ ರೀತಿಯಲ್ಲಿ ಸೆಳೆಯಲಿದ್ದಾರೆ ಎನ್ನುವುದು ಕಾದುನೋಡಬೇಕಾಗಿದೆ. ಒಟ್ಟಾರೆ ಶೆಟ್ಟರ್ ಬೆಳಗಾವಿಯಲ್ಲಿ ಭಾಗಿಯಾಗಲಿರುವ ಕಾರ್ಯಕ್ರಮ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *