ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ ಮಂಗಳಮುಖಿಯರು.

ಚಿಕ್ಕೋಡಿ :ಮಂಗಳಮುಖಿಯರು ಬಸ್ ನಿಲ್ದಾಣದಲ್ಲಿ ನಿಂತು ಬಸ್ ಬಂದಾಗ ಬಸ್‌ಗೆ ಕೈ ಮಾಡಿದರು ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಬಸ್ ತಡೆದು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ‌ ನಡೆದಿದೆ.

ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಅದರಲ್ಲಿ ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ್ದು, ಮಂಗಳಮುಖಿಯರನ್ನು ಕರೆದುಕೊಂಡು ಹೋಗಬೇಕಾಗಿತ್ತು. ಆದರೆ, ಬಸ್ ನಿಲ್ಲಿಸದೆ ಅವರನ್ನು ಕಡೆಗಣಿಸಿ ಹೋಗಿದ್ದು ಖಂಡನೀಯ. ನಾವು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿದ್ದೇವೆ ನಾವು ಕೂಡ ಮನುಷ್ಯರೇ ಎಂದು ಮಂಗಳಮುಖಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *