Breaking News

ಖಾನಾಪುರ: ಶಾಲೆಗಳಿಗೆ ಶನಿವಾರ(ಜು.22) ರಜೆ ಘೋಷಣೆ

ಬೆಳಗಾವಿ, – ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಶನಿವಾರ (ಜು‌.22) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳಿಂದ ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ.

ಫಾಲ್ಸ್ ಭೇಟಿಗೆ ನಿರ್ಬಂಧ:

ಖಾನಾಪುರ ತಾಲ್ಲೂಕಿನ ಚಿಕಲೆ, ಪಾರವಾಡ ಹಾಗೂ ಚಿಗುಲೆ ವಾಟರ್ ಫಾಲ್ಸ್ ಗಳನ್ನು ಹೊರತುಪಡಿಸಿ ಖಾನಾಪುರ ತಾಲ್ಲೂಕಿನ ಇತರೆ ಎಲ್ಲ ಫಾಲ್ಸ್ ಗಳಿಗೆ ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಇನ್ನುಳಿದ ಫಾಲ್ಸ್ ಗಳಿಗೆ ಭೇಟಿಯನ್ನು ನಿರ್ಬಂಧಿಸಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
***

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *